ಅಂಚೆ ಇಲಾಖೆಯಿಂದ ಸೇವೆ | ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪತ್ರ |

October 11, 2022
3:06 PM

ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

Advertisement
Advertisement

ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |
June 13, 2025
1:47 PM
by: ಸಾಯಿಶೇಖರ್ ಕರಿಕಳ
ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |
June 13, 2025
7:35 AM
by: The Rural Mirror ಸುದ್ದಿಜಾಲ
ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ
June 13, 2025
6:59 AM
by: ದ ರೂರಲ್ ಮಿರರ್.ಕಾಂ
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group