ಅಂಚೆ ಇಲಾಖೆಯಿಂದ ಸೇವೆ | ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪತ್ರ |

October 11, 2022
3:06 PM

ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror