ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.
ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…