Advertisement
ಸುದ್ದಿಗಳು

ಅಂಚೆ ಇಲಾಖೆಯಿಂದ ಸೇವೆ | ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪತ್ರ |

Share

ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.

ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago