ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 ಏಪ್ರಿಲ್ 1 ರ ಪೂರ್ವದಲ್ಲಿ ನೋಂದಣಿಯಾದ ಜನನ ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಘಟನೆಗಳು ನೋಂದಣಿಯಾದ ತಾಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ನೋಂದಣಿಯಾದ ಜನನ ಮರಣ ಘಟನೆಗಳನ್ನು ಹೆಸರು, ದಿನಾಂಕ, ತಂದೆ, ತಾಯಿಯ ಹೆಸರು ನಮೂದಿಸಿ ಪ್ರಮಾಣ ಪತ್ರಗಳನ್ನು ಹುಡುಕಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರಗಡೆ ನೋಂದಣಿಯಾದ ಜನನ ಮರಣ ಘಟನೆಗಳ ಪ್ರಮಾಣ ಪತ್ರಗಳನ್ನು ಹುಡುಕಲು ನೋಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ. ಗ್ರಾಮ ಪಂಚಾಯತ್ ಗಳಲ್ಲಿ ಪ್ರತಿಯೊಂದು ಜನನ ಮರಣ ಪ್ರಮಾಣ ಪತ್ರದ ಪ್ರತಿಗಳಿಗೆ ರೂ. 5 ಶುಲ್ಕ ಪಾವತಿಸಬೇಕು ಎಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಅಪರ ಜಿಲ್ಲಾ ಜನನ ಮರಣಗಳ ರಿಜಿಸ್ಟ್ರಾರ್ ಪ್ರಕಟಣೆ ತಿಳಿಸಿದೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…