Advertisement
ಸುದ್ದಿಗಳು

ಗ್ರಾಮ ಪಂಚಾಯತ್ ಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯುವ ಅವಕಾಶ

Share
ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 ಏಪ್ರಿಲ್ 1 ರ ಪೂರ್ವದಲ್ಲಿ ನೋಂದಣಿಯಾದ ಜನನ ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಘಟನೆಗಳು ನೋಂದಣಿಯಾದ ತಾಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.

ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ನೋಂದಣಿಯಾದ ಜನನ ಮರಣ ಘಟನೆಗಳನ್ನು ಹೆಸರು, ದಿನಾಂಕ, ತಂದೆ, ತಾಯಿಯ ಹೆಸರು ನಮೂದಿಸಿ ಪ್ರಮಾಣ ಪತ್ರಗಳನ್ನು ಹುಡುಕಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರಗಡೆ ನೋಂದಣಿಯಾದ ಜನನ ಮರಣ ಘಟನೆಗಳ ಪ್ರಮಾಣ ಪತ್ರಗಳನ್ನು ಹುಡುಕಲು ನೋಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ. ಗ್ರಾಮ ಪಂಚಾಯತ್ ಗಳಲ್ಲಿ ಪ್ರತಿಯೊಂದು ಜನನ ಮರಣ ಪ್ರಮಾಣ ಪತ್ರದ ಪ್ರತಿಗಳಿಗೆ ರೂ. 5 ಶುಲ್ಕ ಪಾವತಿಸಬೇಕು ಎಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಅಪರ ಜಿಲ್ಲಾ ಜನನ ಮರಣಗಳ ರಿಜಿಸ್ಟ್ರಾರ್ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

13 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

13 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago