ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 ಏಪ್ರಿಲ್ 1 ರ ಪೂರ್ವದಲ್ಲಿ ನೋಂದಣಿಯಾದ ಜನನ ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಘಟನೆಗಳು ನೋಂದಣಿಯಾದ ತಾಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ನೋಂದಣಿಯಾದ ಜನನ ಮರಣ ಘಟನೆಗಳನ್ನು ಹೆಸರು, ದಿನಾಂಕ, ತಂದೆ, ತಾಯಿಯ ಹೆಸರು ನಮೂದಿಸಿ ಪ್ರಮಾಣ ಪತ್ರಗಳನ್ನು ಹುಡುಕಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರಗಡೆ ನೋಂದಣಿಯಾದ ಜನನ ಮರಣ ಘಟನೆಗಳ ಪ್ರಮಾಣ ಪತ್ರಗಳನ್ನು ಹುಡುಕಲು ನೋಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ. ಗ್ರಾಮ ಪಂಚಾಯತ್ ಗಳಲ್ಲಿ ಪ್ರತಿಯೊಂದು ಜನನ ಮರಣ ಪ್ರಮಾಣ ಪತ್ರದ ಪ್ರತಿಗಳಿಗೆ ರೂ. 5 ಶುಲ್ಕ ಪಾವತಿಸಬೇಕು ಎಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಅಪರ ಜಿಲ್ಲಾ ಜನನ ಮರಣಗಳ ರಿಜಿಸ್ಟ್ರಾರ್ ಪ್ರಕಟಣೆ ತಿಳಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…