ಜಗದ ಹುಟ್ಟಿನ ಕಾರಣಕರ್ತ ಸೂರ್ಯದೇವ ಹುಟ್ಟಿದ ದಿನ | ರಥಸಪ್ತಮಿ ದಿನದ ವಿಶೇಷ ಆಚರಣೆ ಏನು..?

February 15, 2024
1:13 PM

ಪ್ರತಿ ವರ್ಷದಂತೆ ಮಾಘ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು, ರಥಸಪ್ತಮಿ(Ratha Saptami) ಎಂದು ಆಚರಿಸಲಾಗುತ್ತದೆ, ರಥಸಪ್ತಮಿಯ ದಿನದಂದು ಭಗವಂತ ಶ್ರೀ ಸೂರ್ಯನಾರಾಯಣನನ್ನು(Sun), ಪೂಜಿಸಲಾಗುತ್ತದೆ. ಅಲ್ಲದೇ ರಥಸಪ್ತಮಿಯ ಮತ್ತೊಂದು ವಿಶೇಷವೇನೆಂದರೆ, ಕರ್ನಾಟಕದ ಕೆಲವು ದೇವಸ್ಥಾನಗಳಲ್ಲಿ(Temple) ಈ ದಿನ ವಿಶೇಷ ಪೂಜೆ ನಡೆಯುತ್ತದೆ.

ರಥಸಪ್ತಮಿಯು ಪಂಚಾಂಗದ ಪ್ರಕಾರ ಫೆ.15 ರಂದು ಗುರುವಾರ ಬೆಳಗ್ಗೆ  ಬೆಳಿಗ್ಗೆ,10:12ರಿಂದ, ಫೆ.16 ಶುಕ್ರವಾರ ಬೆಳಿಗ್ಗೆ 08:54ರ ವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ ರಥಸಪ್ತಮಿಯನ್ನು ಫೆಬ್ರವರಿ 16ರಂದು ಆಚರಿಸಲಾಗುತ್ತದೆ.

ಈ ದಿನ ಸ್ನಾನದ ಸಮಯ ಈ ರೀತಿ ಇರುತ್ತದೆ: ಬೆಳಿಗ್ಗೆ 05: 17am ರಿಂದ06:59am ರ ನಡುವೆ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ಮಂಗಳಕರವಾಗಿರುತ್ತದೆ, ಈ ದಿನದಂದು ಸ್ನಾನ ಮತ್ತು ದಾನಕ್ಕೆ ಮಹತ್ವವಿದೆ, ರಥಸಪ್ತಮಿಯ ಶುಭ ಯೋಗ ಈ ರೀತಿ ಇರುತ್ತದೆ, ರಥಸಪ್ತಮಿಯ ದಿನ ಮಧ್ಯಾಹ್ನ 03:18pm ರವರೆಗೆ ಬ್ರಹ್ಮ ಯೋಗವು ರೂಪುಗೊಳ್ಳುತ್ತದೆ. ಈ ದಿನ ಇಂದ್ರ ಯೋಗವು ಸಹರೂಪಗೊಳ್ಳುತ್ತದೆ. ರಥಸಪ್ತಮಿಯ ದಿನದಂದು ಭದ್ರನು ಸ್ವರ್ಗದಲ್ಲಿ ನೆಲೆಸುತ್ತಾನೆ ಮತ್ತು ಭೂಲೋಕದ ಜನರಿಗೆ ಕಲ್ಯಾಣವನ್ನು ನೀಡುತ್ತಾನೆ ಎಂದು ನಂಬಲಾಗಿದೆ.

ಪೂಜಾ ನಿಯಮ: ಅಂದು ಮುಂಜಾನೆ  ಪೂರ್ಣ ಹೃದಯದಿಂದ ಸೂರ್ಯ ದೇವರಿಗೆ ನಮಸ್ಕರಿಸಿ ಪೂಜಾ ಕೋಣೆಯನ್ನು ಶುದ್ಧಗೊಳಿಸಿ ಪೂಜಾ ಸಾಮಾನುಗಳನ್ನು ಹೊಂದಿಸಿಕೊಳ್ಳಿ ಹಾಗೂ ಸೂರ್ಯದೇವನನ್ನು ಸ್ಥಾಪಿಸಿ, ಹೂವು, ಹಣ್ಣು, ಕುಂಕುಮ, ನೈವೇದ್ಯ ಎಲ್ಲವನ್ನು ಅರ್ಪಿಸಬೇಕು. ಅಲ್ಲದೆ ಕೆಂಪು ಹೂಗಳನ್ನು ನೀರಿನಲ್ಲಿ ಸೇರಿಸಿ ಅರ್ಗ್ಯವನ್ನು ಅರ್ಪಿಸಬೇಕು ಹಾಗೂ ಈ ದಿನ ಹಳದಿ ಬಟ್ಟೆಗಳನ್ನು ಧರಿಸಿ ನಿಮ್ಮ ಪೂರ್ಣ ಹೃದಯದಿಂದ ಸೂರ್ಯ ಚಾಲಿಸಾ ಅಥವಾ ಸೂರ್ಯ ಕವಚವನ್ನು ಪಠಿಸಿದರೆ ಉತ್ತಮ

ಬರಹ: ಎಲ್.ವಿವೇಕಾನಂದ ಆಚಾರ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್
ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!
June 9, 2026
11:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror