ಪ್ರತಿ ವರ್ಷದಂತೆ ಮಾಘ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು, ರಥಸಪ್ತಮಿ(Ratha Saptami) ಎಂದು ಆಚರಿಸಲಾಗುತ್ತದೆ, ರಥಸಪ್ತಮಿಯ ದಿನದಂದು ಭಗವಂತ ಶ್ರೀ ಸೂರ್ಯನಾರಾಯಣನನ್ನು(Sun), ಪೂಜಿಸಲಾಗುತ್ತದೆ. ಅಲ್ಲದೇ ರಥಸಪ್ತಮಿಯ ಮತ್ತೊಂದು ವಿಶೇಷವೇನೆಂದರೆ, ಕರ್ನಾಟಕದ ಕೆಲವು ದೇವಸ್ಥಾನಗಳಲ್ಲಿ(Temple) ಈ ದಿನ ವಿಶೇಷ ಪೂಜೆ ನಡೆಯುತ್ತದೆ.
ರಥಸಪ್ತಮಿಯು ಪಂಚಾಂಗದ ಪ್ರಕಾರ ಫೆ.15 ರಂದು ಗುರುವಾರ ಬೆಳಗ್ಗೆ ಬೆಳಿಗ್ಗೆ,10:12ರಿಂದ, ಫೆ.16 ಶುಕ್ರವಾರ ಬೆಳಿಗ್ಗೆ 08:54ರ ವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ ರಥಸಪ್ತಮಿಯನ್ನು ಫೆಬ್ರವರಿ 16ರಂದು ಆಚರಿಸಲಾಗುತ್ತದೆ.
ಈ ದಿನ ಸ್ನಾನದ ಸಮಯ ಈ ರೀತಿ ಇರುತ್ತದೆ: ಬೆಳಿಗ್ಗೆ 05: 17am ರಿಂದ06:59am ರ ನಡುವೆ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ಮಂಗಳಕರವಾಗಿರುತ್ತದೆ, ಈ ದಿನದಂದು ಸ್ನಾನ ಮತ್ತು ದಾನಕ್ಕೆ ಮಹತ್ವವಿದೆ, ರಥಸಪ್ತಮಿಯ ಶುಭ ಯೋಗ ಈ ರೀತಿ ಇರುತ್ತದೆ, ರಥಸಪ್ತಮಿಯ ದಿನ ಮಧ್ಯಾಹ್ನ 03:18pm ರವರೆಗೆ ಬ್ರಹ್ಮ ಯೋಗವು ರೂಪುಗೊಳ್ಳುತ್ತದೆ. ಈ ದಿನ ಇಂದ್ರ ಯೋಗವು ಸಹರೂಪಗೊಳ್ಳುತ್ತದೆ. ರಥಸಪ್ತಮಿಯ ದಿನದಂದು ಭದ್ರನು ಸ್ವರ್ಗದಲ್ಲಿ ನೆಲೆಸುತ್ತಾನೆ ಮತ್ತು ಭೂಲೋಕದ ಜನರಿಗೆ ಕಲ್ಯಾಣವನ್ನು ನೀಡುತ್ತಾನೆ ಎಂದು ನಂಬಲಾಗಿದೆ.
ಪೂಜಾ ನಿಯಮ: ಅಂದು ಮುಂಜಾನೆ ಪೂರ್ಣ ಹೃದಯದಿಂದ ಸೂರ್ಯ ದೇವರಿಗೆ ನಮಸ್ಕರಿಸಿ ಪೂಜಾ ಕೋಣೆಯನ್ನು ಶುದ್ಧಗೊಳಿಸಿ ಪೂಜಾ ಸಾಮಾನುಗಳನ್ನು ಹೊಂದಿಸಿಕೊಳ್ಳಿ ಹಾಗೂ ಸೂರ್ಯದೇವನನ್ನು ಸ್ಥಾಪಿಸಿ, ಹೂವು, ಹಣ್ಣು, ಕುಂಕುಮ, ನೈವೇದ್ಯ ಎಲ್ಲವನ್ನು ಅರ್ಪಿಸಬೇಕು. ಅಲ್ಲದೆ ಕೆಂಪು ಹೂಗಳನ್ನು ನೀರಿನಲ್ಲಿ ಸೇರಿಸಿ ಅರ್ಗ್ಯವನ್ನು ಅರ್ಪಿಸಬೇಕು ಹಾಗೂ ಈ ದಿನ ಹಳದಿ ಬಟ್ಟೆಗಳನ್ನು ಧರಿಸಿ ನಿಮ್ಮ ಪೂರ್ಣ ಹೃದಯದಿಂದ ಸೂರ್ಯ ಚಾಲಿಸಾ ಅಥವಾ ಸೂರ್ಯ ಕವಚವನ್ನು ಪಠಿಸಿದರೆ ಉತ್ತಮ
ಬರಹ: ಎಲ್.ವಿವೇಕಾನಂದ ಆಚಾರ್ಯ
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…