ಪ್ರತಿ ವರ್ಷದಂತೆ ಮಾಘ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು, ರಥಸಪ್ತಮಿ(Ratha Saptami) ಎಂದು ಆಚರಿಸಲಾಗುತ್ತದೆ, ರಥಸಪ್ತಮಿಯ ದಿನದಂದು ಭಗವಂತ ಶ್ರೀ ಸೂರ್ಯನಾರಾಯಣನನ್ನು(Sun), ಪೂಜಿಸಲಾಗುತ್ತದೆ. ಅಲ್ಲದೇ ರಥಸಪ್ತಮಿಯ ಮತ್ತೊಂದು ವಿಶೇಷವೇನೆಂದರೆ, ಕರ್ನಾಟಕದ ಕೆಲವು ದೇವಸ್ಥಾನಗಳಲ್ಲಿ(Temple) ಈ ದಿನ ವಿಶೇಷ ಪೂಜೆ ನಡೆಯುತ್ತದೆ.
ರಥಸಪ್ತಮಿಯು ಪಂಚಾಂಗದ ಪ್ರಕಾರ ಫೆ.15 ರಂದು ಗುರುವಾರ ಬೆಳಗ್ಗೆ ಬೆಳಿಗ್ಗೆ,10:12ರಿಂದ, ಫೆ.16 ಶುಕ್ರವಾರ ಬೆಳಿಗ್ಗೆ 08:54ರ ವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ ರಥಸಪ್ತಮಿಯನ್ನು ಫೆಬ್ರವರಿ 16ರಂದು ಆಚರಿಸಲಾಗುತ್ತದೆ.
ಈ ದಿನ ಸ್ನಾನದ ಸಮಯ ಈ ರೀತಿ ಇರುತ್ತದೆ: ಬೆಳಿಗ್ಗೆ 05: 17am ರಿಂದ06:59am ರ ನಡುವೆ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ಮಂಗಳಕರವಾಗಿರುತ್ತದೆ, ಈ ದಿನದಂದು ಸ್ನಾನ ಮತ್ತು ದಾನಕ್ಕೆ ಮಹತ್ವವಿದೆ, ರಥಸಪ್ತಮಿಯ ಶುಭ ಯೋಗ ಈ ರೀತಿ ಇರುತ್ತದೆ, ರಥಸಪ್ತಮಿಯ ದಿನ ಮಧ್ಯಾಹ್ನ 03:18pm ರವರೆಗೆ ಬ್ರಹ್ಮ ಯೋಗವು ರೂಪುಗೊಳ್ಳುತ್ತದೆ. ಈ ದಿನ ಇಂದ್ರ ಯೋಗವು ಸಹರೂಪಗೊಳ್ಳುತ್ತದೆ. ರಥಸಪ್ತಮಿಯ ದಿನದಂದು ಭದ್ರನು ಸ್ವರ್ಗದಲ್ಲಿ ನೆಲೆಸುತ್ತಾನೆ ಮತ್ತು ಭೂಲೋಕದ ಜನರಿಗೆ ಕಲ್ಯಾಣವನ್ನು ನೀಡುತ್ತಾನೆ ಎಂದು ನಂಬಲಾಗಿದೆ.
ಪೂಜಾ ನಿಯಮ: ಅಂದು ಮುಂಜಾನೆ ಪೂರ್ಣ ಹೃದಯದಿಂದ ಸೂರ್ಯ ದೇವರಿಗೆ ನಮಸ್ಕರಿಸಿ ಪೂಜಾ ಕೋಣೆಯನ್ನು ಶುದ್ಧಗೊಳಿಸಿ ಪೂಜಾ ಸಾಮಾನುಗಳನ್ನು ಹೊಂದಿಸಿಕೊಳ್ಳಿ ಹಾಗೂ ಸೂರ್ಯದೇವನನ್ನು ಸ್ಥಾಪಿಸಿ, ಹೂವು, ಹಣ್ಣು, ಕುಂಕುಮ, ನೈವೇದ್ಯ ಎಲ್ಲವನ್ನು ಅರ್ಪಿಸಬೇಕು. ಅಲ್ಲದೆ ಕೆಂಪು ಹೂಗಳನ್ನು ನೀರಿನಲ್ಲಿ ಸೇರಿಸಿ ಅರ್ಗ್ಯವನ್ನು ಅರ್ಪಿಸಬೇಕು ಹಾಗೂ ಈ ದಿನ ಹಳದಿ ಬಟ್ಟೆಗಳನ್ನು ಧರಿಸಿ ನಿಮ್ಮ ಪೂರ್ಣ ಹೃದಯದಿಂದ ಸೂರ್ಯ ಚಾಲಿಸಾ ಅಥವಾ ಸೂರ್ಯ ಕವಚವನ್ನು ಪಠಿಸಿದರೆ ಉತ್ತಮ
ಬರಹ: ಎಲ್.ವಿವೇಕಾನಂದ ಆಚಾರ್ಯ
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…