Advertisement
Opinion

ಜಗದ ಹುಟ್ಟಿನ ಕಾರಣಕರ್ತ ಸೂರ್ಯದೇವ ಹುಟ್ಟಿದ ದಿನ | ರಥಸಪ್ತಮಿ ದಿನದ ವಿಶೇಷ ಆಚರಣೆ ಏನು..?

Share

ಪ್ರತಿ ವರ್ಷದಂತೆ ಮಾಘ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು, ರಥಸಪ್ತಮಿ(Ratha Saptami) ಎಂದು ಆಚರಿಸಲಾಗುತ್ತದೆ, ರಥಸಪ್ತಮಿಯ ದಿನದಂದು ಭಗವಂತ ಶ್ರೀ ಸೂರ್ಯನಾರಾಯಣನನ್ನು(Sun), ಪೂಜಿಸಲಾಗುತ್ತದೆ. ಅಲ್ಲದೇ ರಥಸಪ್ತಮಿಯ ಮತ್ತೊಂದು ವಿಶೇಷವೇನೆಂದರೆ, ಕರ್ನಾಟಕದ ಕೆಲವು ದೇವಸ್ಥಾನಗಳಲ್ಲಿ(Temple) ಈ ದಿನ ವಿಶೇಷ ಪೂಜೆ ನಡೆಯುತ್ತದೆ.

ರಥಸಪ್ತಮಿಯು ಪಂಚಾಂಗದ ಪ್ರಕಾರ ಫೆ.15 ರಂದು ಗುರುವಾರ ಬೆಳಗ್ಗೆ  ಬೆಳಿಗ್ಗೆ,10:12ರಿಂದ, ಫೆ.16 ಶುಕ್ರವಾರ ಬೆಳಿಗ್ಗೆ 08:54ರ ವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ ರಥಸಪ್ತಮಿಯನ್ನು ಫೆಬ್ರವರಿ 16ರಂದು ಆಚರಿಸಲಾಗುತ್ತದೆ.

ಈ ದಿನ ಸ್ನಾನದ ಸಮಯ ಈ ರೀತಿ ಇರುತ್ತದೆ: ಬೆಳಿಗ್ಗೆ 05: 17am ರಿಂದ06:59am ರ ನಡುವೆ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ಮಂಗಳಕರವಾಗಿರುತ್ತದೆ, ಈ ದಿನದಂದು ಸ್ನಾನ ಮತ್ತು ದಾನಕ್ಕೆ ಮಹತ್ವವಿದೆ, ರಥಸಪ್ತಮಿಯ ಶುಭ ಯೋಗ ಈ ರೀತಿ ಇರುತ್ತದೆ, ರಥಸಪ್ತಮಿಯ ದಿನ ಮಧ್ಯಾಹ್ನ 03:18pm ರವರೆಗೆ ಬ್ರಹ್ಮ ಯೋಗವು ರೂಪುಗೊಳ್ಳುತ್ತದೆ. ಈ ದಿನ ಇಂದ್ರ ಯೋಗವು ಸಹರೂಪಗೊಳ್ಳುತ್ತದೆ. ರಥಸಪ್ತಮಿಯ ದಿನದಂದು ಭದ್ರನು ಸ್ವರ್ಗದಲ್ಲಿ ನೆಲೆಸುತ್ತಾನೆ ಮತ್ತು ಭೂಲೋಕದ ಜನರಿಗೆ ಕಲ್ಯಾಣವನ್ನು ನೀಡುತ್ತಾನೆ ಎಂದು ನಂಬಲಾಗಿದೆ.

ಪೂಜಾ ನಿಯಮ: ಅಂದು ಮುಂಜಾನೆ  ಪೂರ್ಣ ಹೃದಯದಿಂದ ಸೂರ್ಯ ದೇವರಿಗೆ ನಮಸ್ಕರಿಸಿ ಪೂಜಾ ಕೋಣೆಯನ್ನು ಶುದ್ಧಗೊಳಿಸಿ ಪೂಜಾ ಸಾಮಾನುಗಳನ್ನು ಹೊಂದಿಸಿಕೊಳ್ಳಿ ಹಾಗೂ ಸೂರ್ಯದೇವನನ್ನು ಸ್ಥಾಪಿಸಿ, ಹೂವು, ಹಣ್ಣು, ಕುಂಕುಮ, ನೈವೇದ್ಯ ಎಲ್ಲವನ್ನು ಅರ್ಪಿಸಬೇಕು. ಅಲ್ಲದೆ ಕೆಂಪು ಹೂಗಳನ್ನು ನೀರಿನಲ್ಲಿ ಸೇರಿಸಿ ಅರ್ಗ್ಯವನ್ನು ಅರ್ಪಿಸಬೇಕು ಹಾಗೂ ಈ ದಿನ ಹಳದಿ ಬಟ್ಟೆಗಳನ್ನು ಧರಿಸಿ ನಿಮ್ಮ ಪೂರ್ಣ ಹೃದಯದಿಂದ ಸೂರ್ಯ ಚಾಲಿಸಾ ಅಥವಾ ಸೂರ್ಯ ಕವಚವನ್ನು ಪಠಿಸಿದರೆ ಉತ್ತಮ

ಬರಹ: ಎಲ್.ವಿವೇಕಾನಂದ ಆಚಾರ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

1 hour ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

7 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

11 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago