Advertisement
Opinion

ಜಗದ ಹುಟ್ಟಿನ ಕಾರಣಕರ್ತ ಸೂರ್ಯದೇವ ಹುಟ್ಟಿದ ದಿನ | ರಥಸಪ್ತಮಿ ದಿನದ ವಿಶೇಷ ಆಚರಣೆ ಏನು..?

Share

ಪ್ರತಿ ವರ್ಷದಂತೆ ಮಾಘ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು, ರಥಸಪ್ತಮಿ(Ratha Saptami) ಎಂದು ಆಚರಿಸಲಾಗುತ್ತದೆ, ರಥಸಪ್ತಮಿಯ ದಿನದಂದು ಭಗವಂತ ಶ್ರೀ ಸೂರ್ಯನಾರಾಯಣನನ್ನು(Sun), ಪೂಜಿಸಲಾಗುತ್ತದೆ. ಅಲ್ಲದೇ ರಥಸಪ್ತಮಿಯ ಮತ್ತೊಂದು ವಿಶೇಷವೇನೆಂದರೆ, ಕರ್ನಾಟಕದ ಕೆಲವು ದೇವಸ್ಥಾನಗಳಲ್ಲಿ(Temple) ಈ ದಿನ ವಿಶೇಷ ಪೂಜೆ ನಡೆಯುತ್ತದೆ.

ರಥಸಪ್ತಮಿಯು ಪಂಚಾಂಗದ ಪ್ರಕಾರ ಫೆ.15 ರಂದು ಗುರುವಾರ ಬೆಳಗ್ಗೆ  ಬೆಳಿಗ್ಗೆ,10:12ರಿಂದ, ಫೆ.16 ಶುಕ್ರವಾರ ಬೆಳಿಗ್ಗೆ 08:54ರ ವರೆಗೆ ಇರುತ್ತದೆ. ಉದಯ ತಿಥಿಯ ಪ್ರಕಾರ ರಥಸಪ್ತಮಿಯನ್ನು ಫೆಬ್ರವರಿ 16ರಂದು ಆಚರಿಸಲಾಗುತ್ತದೆ.

ಈ ದಿನ ಸ್ನಾನದ ಸಮಯ ಈ ರೀತಿ ಇರುತ್ತದೆ: ಬೆಳಿಗ್ಗೆ 05: 17am ರಿಂದ06:59am ರ ನಡುವೆ ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು ಮಂಗಳಕರವಾಗಿರುತ್ತದೆ, ಈ ದಿನದಂದು ಸ್ನಾನ ಮತ್ತು ದಾನಕ್ಕೆ ಮಹತ್ವವಿದೆ, ರಥಸಪ್ತಮಿಯ ಶುಭ ಯೋಗ ಈ ರೀತಿ ಇರುತ್ತದೆ, ರಥಸಪ್ತಮಿಯ ದಿನ ಮಧ್ಯಾಹ್ನ 03:18pm ರವರೆಗೆ ಬ್ರಹ್ಮ ಯೋಗವು ರೂಪುಗೊಳ್ಳುತ್ತದೆ. ಈ ದಿನ ಇಂದ್ರ ಯೋಗವು ಸಹರೂಪಗೊಳ್ಳುತ್ತದೆ. ರಥಸಪ್ತಮಿಯ ದಿನದಂದು ಭದ್ರನು ಸ್ವರ್ಗದಲ್ಲಿ ನೆಲೆಸುತ್ತಾನೆ ಮತ್ತು ಭೂಲೋಕದ ಜನರಿಗೆ ಕಲ್ಯಾಣವನ್ನು ನೀಡುತ್ತಾನೆ ಎಂದು ನಂಬಲಾಗಿದೆ.

ಪೂಜಾ ನಿಯಮ: ಅಂದು ಮುಂಜಾನೆ  ಪೂರ್ಣ ಹೃದಯದಿಂದ ಸೂರ್ಯ ದೇವರಿಗೆ ನಮಸ್ಕರಿಸಿ ಪೂಜಾ ಕೋಣೆಯನ್ನು ಶುದ್ಧಗೊಳಿಸಿ ಪೂಜಾ ಸಾಮಾನುಗಳನ್ನು ಹೊಂದಿಸಿಕೊಳ್ಳಿ ಹಾಗೂ ಸೂರ್ಯದೇವನನ್ನು ಸ್ಥಾಪಿಸಿ, ಹೂವು, ಹಣ್ಣು, ಕುಂಕುಮ, ನೈವೇದ್ಯ ಎಲ್ಲವನ್ನು ಅರ್ಪಿಸಬೇಕು. ಅಲ್ಲದೆ ಕೆಂಪು ಹೂಗಳನ್ನು ನೀರಿನಲ್ಲಿ ಸೇರಿಸಿ ಅರ್ಗ್ಯವನ್ನು ಅರ್ಪಿಸಬೇಕು ಹಾಗೂ ಈ ದಿನ ಹಳದಿ ಬಟ್ಟೆಗಳನ್ನು ಧರಿಸಿ ನಿಮ್ಮ ಪೂರ್ಣ ಹೃದಯದಿಂದ ಸೂರ್ಯ ಚಾಲಿಸಾ ಅಥವಾ ಸೂರ್ಯ ಕವಚವನ್ನು ಪಠಿಸಿದರೆ ಉತ್ತಮ

ಬರಹ: ಎಲ್.ವಿವೇಕಾನಂದ ಆಚಾರ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

3 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

19 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago