Advertisement
MIRROR FOCUS

ಕಾಡುಪ್ರಾಣಿಗಳಿಗಾಗಿ ಹಣ್ಣಿನ ಗಿಡ ಬೆಳೆಸುವ ಯೋಜನೆ | ರಾಜ್ಯದಲ್ಲಿ 10 ಲಕ್ಷ ಗಿಡಗಳ ನಾಟಿ | ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹತ್ವದ ಹೆಜ್ಜೆ |

Share

ಶ್ರೀ ಕ್ಷೇತ್ರ  ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ ಮೂವತ್ತೈದು ಲಕ್ಷರೂ. ವೆಚ್ಚದಲ್ಲಿ ಹತ್ತು ಲಕ್ಷ ಗಿಡಗಳನ್ನು ನಾಟಿ ಮಾಡಲಾಗುವುದು ಎಂದು ಧರ್ಮಸ್ಥಳದ ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದಡಂತಮಲೆರಕ್ಷಿತಾರಣ್ಯದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿಅರಣ್ಯ ಇಲಾಖೆ ಮತ್ತು ಸ್ಥಳೀಯ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾಡುಪ್ರಾಣಿಗಳಿಗಾಗಿ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ “ ಬಿತ್ತೋತ್ಸವ” ಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಂದರ ಪ್ರಕೃತಿ-ಪರಿಸರವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರಕೃತಿಯ ಸಮತೋಲನವನ್ನುಕಾಪಾಡುವ ಕಾಡು ಪ್ರಾಣಿಗಳನ್ನು ರಕ್ಷಿಸಬೇಕು. ಎಲ್ಲರೂ ಪರಿಸರ ಸಂರಕ್ಷಣೆಗೆ ದೃಢ ಸಂಕಲ್ಪ ಮಾಡಿ ಕೆಲಸ ಮಾಡಿದರೆಅದು ಮುಂದಿನ ಪೀಳಿಗೆಗೆ ಉತ್ತಮ ಕೊಡುಗೆಯಾಗುತ್ತದೆ. ಮಣ್ಣಿನ ಸವಕಳಿಯಿಂದ ಅಪಾಯ ಉಂಟಾಗಲು ಅರಣ್ಯ ನಾಶವೇ ಕಾರಣವೆಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ ಶಾಸಕ ಹರೀಶ್ ಪೂಂಜ, ಹೆಗ್ಗಡೆಯವರ ಪರಿಸರ ಸಂರಕ್ಷಣೆಯ ಕಾಳಜಿ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿದರು.

ಜಿಲ್ಲಾ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‍ ಎಸ್. ನೆಟಲ್‍ಕರ್, ಉಪ ಸಂರಕ್ಷಣಾಧಿಕಾರಿ ಡಾ. ವೈ.ಕೆ. ದಿನೇಶ್‍ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಉಪಸ್ಥಿತರಿದ್ದರು.

ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ವಿ. ಕಾರ್ಯಪ್ಪ ಸ್ವಾಗತಿಸಿದರು. ಜೈವಂತ ಪಟಗಾರ್‍ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.‌ ಧರ್ಮಸ್ಥಳದ ನೇತೃತ್ವದಲ್ಲಿ ಈ ಬಾರಿ ಜೂನ್ 5 ರಂದು ರಾಜ್ಯದ 175 ತಾಲೂಕುಗಳ 875 ಸ್ಥಳಗಳಲ್ಲಿ 1,81,000 ಗಿಡಗಳನ್ನು ನೆಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

9 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

13 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago