Advertisement
MIRROR FOCUS

ಕಾಡುಪ್ರಾಣಿಗಳಿಗಾಗಿ ಹಣ್ಣಿನ ಗಿಡ ಬೆಳೆಸುವ ಯೋಜನೆ | ರಾಜ್ಯದಲ್ಲಿ 10 ಲಕ್ಷ ಗಿಡಗಳ ನಾಟಿ | ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹತ್ವದ ಹೆಜ್ಜೆ |

Share

ಶ್ರೀ ಕ್ಷೇತ್ರ  ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ ಮೂವತ್ತೈದು ಲಕ್ಷರೂ. ವೆಚ್ಚದಲ್ಲಿ ಹತ್ತು ಲಕ್ಷ ಗಿಡಗಳನ್ನು ನಾಟಿ ಮಾಡಲಾಗುವುದು ಎಂದು ಧರ್ಮಸ್ಥಳದ ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದಡಂತಮಲೆರಕ್ಷಿತಾರಣ್ಯದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿಅರಣ್ಯ ಇಲಾಖೆ ಮತ್ತು ಸ್ಥಳೀಯ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾಡುಪ್ರಾಣಿಗಳಿಗಾಗಿ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ “ ಬಿತ್ತೋತ್ಸವ” ಕ್ಕೆ ಚಾಲನೆ ನೀಡಿ ಮಾತನಾಡಿದರು. ಸುಂದರ ಪ್ರಕೃತಿ-ಪರಿಸರವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರಕೃತಿಯ ಸಮತೋಲನವನ್ನುಕಾಪಾಡುವ ಕಾಡು ಪ್ರಾಣಿಗಳನ್ನು ರಕ್ಷಿಸಬೇಕು. ಎಲ್ಲರೂ ಪರಿಸರ ಸಂರಕ್ಷಣೆಗೆ ದೃಢ ಸಂಕಲ್ಪ ಮಾಡಿ ಕೆಲಸ ಮಾಡಿದರೆಅದು ಮುಂದಿನ ಪೀಳಿಗೆಗೆ ಉತ್ತಮ ಕೊಡುಗೆಯಾಗುತ್ತದೆ. ಮಣ್ಣಿನ ಸವಕಳಿಯಿಂದ ಅಪಾಯ ಉಂಟಾಗಲು ಅರಣ್ಯ ನಾಶವೇ ಕಾರಣವೆಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ ಶಾಸಕ ಹರೀಶ್ ಪೂಂಜ, ಹೆಗ್ಗಡೆಯವರ ಪರಿಸರ ಸಂರಕ್ಷಣೆಯ ಕಾಳಜಿ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿದರು.

ಜಿಲ್ಲಾ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‍ ಎಸ್. ನೆಟಲ್‍ಕರ್, ಉಪ ಸಂರಕ್ಷಣಾಧಿಕಾರಿ ಡಾ. ವೈ.ಕೆ. ದಿನೇಶ್‍ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಉಪಸ್ಥಿತರಿದ್ದರು.

ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ವಿ. ಕಾರ್ಯಪ್ಪ ಸ್ವಾಗತಿಸಿದರು. ಜೈವಂತ ಪಟಗಾರ್‍ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.‌ ಧರ್ಮಸ್ಥಳದ ನೇತೃತ್ವದಲ್ಲಿ ಈ ಬಾರಿ ಜೂನ್ 5 ರಂದು ರಾಜ್ಯದ 175 ತಾಲೂಕುಗಳ 875 ಸ್ಥಳಗಳಲ್ಲಿ 1,81,000 ಗಿಡಗಳನ್ನು ನೆಡಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

7 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

8 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

12 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

13 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago