ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನುಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ ಟಿವಿ ಲಿಟ್ಲ್ ಚಾಂಪ್ಸ್ ಕುಮಾರಿ ಜ್ಞಾನ ಗುರುರಾಜ್ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ ಗುರುದೇವ್ ಅಕಾಡೆಮಿ ಇನ್ಷ್ ಸ್ಟಿಟ್ಯೂಟ್ ಆಪ್ ಬಳಗದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಎ.ವಿ.ತೀರ್ಥರಾಮ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರಾಜು ಲಿಂಬಾವಳಿ, ಆನಂದ ಮೂರ್ತಿ ,ಭರತ್ ಶೆಟ್ಟಿ, ನ್ಯಾಯವಾದಿ ಜೆ ಪಿ ರೈ ಪೆರುವಾಜೆ, ಹರ್ಷಿತ್ ಕೊಡಪಾಲ ಉಪಸ್ಥಿತರಿದ್ದರು.
ಬೆಂಗಳೂರಲ್ಲಿ ನೆಲೆಸಿದ ಬಹುತೇಕ ಸುಳ್ಯದವರು ಉಪಸ್ಥಿತರಿದ್ದರು. ನಾಗೇಶ್ ಕುಮಾರ್ ಕಲ್ಲುಮುಟ್ಳು ಸ್ವಾಗತಿಸಿ , ನಾರಾಯಣ ಹೆಗ್ಗಡೆ ವಂದಿಸಿ, ಶ್ರೀನಾಥ್ ಹೆಗ್ಗಡೆ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ನಾಗೇಶ್ ಕುಮಾರ್, ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ಖಂಡಿಗೆಮೂಲೆ ಇವರು ಸಹಕರಿಸಿದರು.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…