ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನುಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ ಟಿವಿ ಲಿಟ್ಲ್ ಚಾಂಪ್ಸ್ ಕುಮಾರಿ ಜ್ಞಾನ ಗುರುರಾಜ್ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ ಗುರುದೇವ್ ಅಕಾಡೆಮಿ ಇನ್ಷ್ ಸ್ಟಿಟ್ಯೂಟ್ ಆಪ್ ಬಳಗದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಎ.ವಿ.ತೀರ್ಥರಾಮ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರಾಜು ಲಿಂಬಾವಳಿ, ಆನಂದ ಮೂರ್ತಿ ,ಭರತ್ ಶೆಟ್ಟಿ, ನ್ಯಾಯವಾದಿ ಜೆ ಪಿ ರೈ ಪೆರುವಾಜೆ, ಹರ್ಷಿತ್ ಕೊಡಪಾಲ ಉಪಸ್ಥಿತರಿದ್ದರು.
ಬೆಂಗಳೂರಲ್ಲಿ ನೆಲೆಸಿದ ಬಹುತೇಕ ಸುಳ್ಯದವರು ಉಪಸ್ಥಿತರಿದ್ದರು. ನಾಗೇಶ್ ಕುಮಾರ್ ಕಲ್ಲುಮುಟ್ಳು ಸ್ವಾಗತಿಸಿ , ನಾರಾಯಣ ಹೆಗ್ಗಡೆ ವಂದಿಸಿ, ಶ್ರೀನಾಥ್ ಹೆಗ್ಗಡೆ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ನಾಗೇಶ್ ಕುಮಾರ್, ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ಖಂಡಿಗೆಮೂಲೆ ಇವರು ಸಹಕರಿಸಿದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…