ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನುಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ ಟಿವಿ ಲಿಟ್ಲ್ ಚಾಂಪ್ಸ್ ಕುಮಾರಿ ಜ್ಞಾನ ಗುರುರಾಜ್ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ ಗುರುದೇವ್ ಅಕಾಡೆಮಿ ಇನ್ಷ್ ಸ್ಟಿಟ್ಯೂಟ್ ಆಪ್ ಬಳಗದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಎ.ವಿ.ತೀರ್ಥರಾಮ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ರಾಜು ಲಿಂಬಾವಳಿ, ಆನಂದ ಮೂರ್ತಿ ,ಭರತ್ ಶೆಟ್ಟಿ, ನ್ಯಾಯವಾದಿ ಜೆ ಪಿ ರೈ ಪೆರುವಾಜೆ, ಹರ್ಷಿತ್ ಕೊಡಪಾಲ ಉಪಸ್ಥಿತರಿದ್ದರು.
ಬೆಂಗಳೂರಲ್ಲಿ ನೆಲೆಸಿದ ಬಹುತೇಕ ಸುಳ್ಯದವರು ಉಪಸ್ಥಿತರಿದ್ದರು. ನಾಗೇಶ್ ಕುಮಾರ್ ಕಲ್ಲುಮುಟ್ಳು ಸ್ವಾಗತಿಸಿ , ನಾರಾಯಣ ಹೆಗ್ಗಡೆ ವಂದಿಸಿ, ಶ್ರೀನಾಥ್ ಹೆಗ್ಗಡೆ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ನಾಗೇಶ್ ಕುಮಾರ್, ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ಖಂಡಿಗೆಮೂಲೆ ಇವರು ಸಹಕರಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…