Advertisement
ಸುದ್ದಿಗಳು

ಲೋಕಸಭಾ ಚುನಾವಣೆ | ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ | ಹಲವು ಹಾಲಿ ಸಂಸದರಿಗೆ ಟಿಕೆಟ್‌ ಇಲ್ಲ |

Share

 ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಚುನಾವಣಾ ತಯಾರಿ ನಡುವೆಯೇ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳನ್ನ ಘೋಷಿಸಿದ್ದ ಬಿಜೆಪಿ ಈಗ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು  ಘೋಷಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ನಿರಾಕರಿಸಲಾಗಿದೆ.

ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್​ ಚೌಟ, ಮೈಸೂರಿನಲ್ಲಿ ಪ್ರತಾಪ್​ ಸಿಂಹ ಬದಲಿಗೆ ಯದುವೀರ ಒಡೆಯರ್​ಗೆ , ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲಿಗೆ ಶ್ರೀರಾಮುಲುಗೆ , ಹಾವೇರಿಯಲ್ಲಿ ಶಿವಕುಮಾರ್ ಬದಲಿಗೆ ಬಸವರಾಜ ಬೊಮ್ಮಾಯಿಗೆ , ತುಮಕೂರಿನಲ್ಲಿ ಬಸವರಾಜು ಬದಲು ಸೋಮಣ್ಣ ಗೆ , ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ​ ಕ್ಯಾವಟರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಸಂಸದ ಸದಾನಂದ ಗೌಡರಿಗೆ ಟಿಕೆಟ್‌ ನೀಡಲಾಗಿಲ್ಲ.

ಚಿಕ್ಕೋಡಿ -ಅಣ್ಣಾ ಸಾಹೇಬ್ ಜೊಲ್ಲೆ, ಬಾಗಲಕೋಟೆ -ಪಿ.ಸಿ.ಗದ್ದಿಗೌಡರ್,  ಉಡುಪಿ-ಚಿಕ್ಕಮಗಳೂರು -ಕೋಟ ಶ್ರೀನಿವಾಸ ಪೂಜಾರಿ,  ಹಾವೇರಿ -ಬಸವರಾಜ ಬೊಮ್ಮಾಯಿ,  ಮೈಸೂರು -ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್,  ಬೆಂಗಳೂರು ಗ್ರಾಮಾಂತರ -ಡಾ.ಸಿ.ಎನ್.ಮಂಜುನಾಥ , ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ , ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ,  ಬೆಂಗಳೂರು ಕೇಂದ್ರ -ಪಿ.ಸಿ.ಮೋಹನ್,  ತುಮಕೂರು -ವಿ.ಸೋಮಣ್ಣ,  ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟ,  ಚಾಮರಾಜನಗರ -ಎಸ್.ಬಾಲರಾಜು,  ಧಾರವಾಡ -ಪ್ರಹ್ಲಾದ್ ಜೋಶಿ,  ಕೊಪ್ಪಳ -ಡಾ.ಬಸವರಾಜ ತ್ಯಾವಟೂರು,  ದಾವಣಗೆರೆ -ಗಾಯತ್ರಿ ಸಿದ್ದೇಶ್ವರ್ , ಬಳ್ಳಾರಿ -ಬಿ.ಶ್ರೀರಾಮುಲು,  ಕಲಬುರಗಿ -ಡಾ.ಉಮೇಶ್ ಜಾಧವ್ , ಬೀದರ್ -ಭಗವಂತ ಖೂಬಾ ವಿಜಯಪುರ -ರಮೇಶ್ ಜಿಗಜಿಣಗಿ,  ಶಿವಮೊಗ್ಗ -ಬಿ.ವೈ.ರಾಘವೇಂದ್ರ ಅವರಿಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago