Advertisement
ಸುದ್ದಿಗಳು

ಲೋಕಸಭಾ ಚುನಾವಣೆ | ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ | ಹಲವು ಹಾಲಿ ಸಂಸದರಿಗೆ ಟಿಕೆಟ್‌ ಇಲ್ಲ |

Share

 ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಚುನಾವಣಾ ತಯಾರಿ ನಡುವೆಯೇ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಅಭ್ಯರ್ಥಿಗಳನ್ನ ಘೋಷಿಸಿದ್ದ ಬಿಜೆಪಿ ಈಗ 72 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು  ಘೋಷಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ನಿರಾಕರಿಸಲಾಗಿದೆ.

ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್​ ಚೌಟ, ಮೈಸೂರಿನಲ್ಲಿ ಪ್ರತಾಪ್​ ಸಿಂಹ ಬದಲಿಗೆ ಯದುವೀರ ಒಡೆಯರ್​ಗೆ , ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲಿಗೆ ಶ್ರೀರಾಮುಲುಗೆ , ಹಾವೇರಿಯಲ್ಲಿ ಶಿವಕುಮಾರ್ ಬದಲಿಗೆ ಬಸವರಾಜ ಬೊಮ್ಮಾಯಿಗೆ , ತುಮಕೂರಿನಲ್ಲಿ ಬಸವರಾಜು ಬದಲು ಸೋಮಣ್ಣ ಗೆ , ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ​ ಕ್ಯಾವಟರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಸಂಸದ ಸದಾನಂದ ಗೌಡರಿಗೆ ಟಿಕೆಟ್‌ ನೀಡಲಾಗಿಲ್ಲ.

ಚಿಕ್ಕೋಡಿ -ಅಣ್ಣಾ ಸಾಹೇಬ್ ಜೊಲ್ಲೆ, ಬಾಗಲಕೋಟೆ -ಪಿ.ಸಿ.ಗದ್ದಿಗೌಡರ್,  ಉಡುಪಿ-ಚಿಕ್ಕಮಗಳೂರು -ಕೋಟ ಶ್ರೀನಿವಾಸ ಪೂಜಾರಿ,  ಹಾವೇರಿ -ಬಸವರಾಜ ಬೊಮ್ಮಾಯಿ,  ಮೈಸೂರು -ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್,  ಬೆಂಗಳೂರು ಗ್ರಾಮಾಂತರ -ಡಾ.ಸಿ.ಎನ್.ಮಂಜುನಾಥ , ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ , ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ,  ಬೆಂಗಳೂರು ಕೇಂದ್ರ -ಪಿ.ಸಿ.ಮೋಹನ್,  ತುಮಕೂರು -ವಿ.ಸೋಮಣ್ಣ,  ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟ,  ಚಾಮರಾಜನಗರ -ಎಸ್.ಬಾಲರಾಜು,  ಧಾರವಾಡ -ಪ್ರಹ್ಲಾದ್ ಜೋಶಿ,  ಕೊಪ್ಪಳ -ಡಾ.ಬಸವರಾಜ ತ್ಯಾವಟೂರು,  ದಾವಣಗೆರೆ -ಗಾಯತ್ರಿ ಸಿದ್ದೇಶ್ವರ್ , ಬಳ್ಳಾರಿ -ಬಿ.ಶ್ರೀರಾಮುಲು,  ಕಲಬುರಗಿ -ಡಾ.ಉಮೇಶ್ ಜಾಧವ್ , ಬೀದರ್ -ಭಗವಂತ ಖೂಬಾ ವಿಜಯಪುರ -ರಮೇಶ್ ಜಿಗಜಿಣಗಿ,  ಶಿವಮೊಗ್ಗ -ಬಿ.ವೈ.ರಾಘವೇಂದ್ರ ಅವರಿಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago