ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು, 5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ. ರಾಜಧಾನಿಯಲ್ಲಿಂದು ಮಳೆ ಹಾನಿ ಪರಿಸ್ಥಿತಿ ಪರಿಶೀಲಿಸಿದ ಅವರು, ಮಲೆನಾಡಿನಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಭತ್ತ ಬೆಳೆ ನೀರಿನಲ್ಲಿ ಮುಳುಗಿದೆ . ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಜಲಾವೃತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೀಘ್ರವೇ ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಎಲ್ಲೆಲ್ಲಿ ಅನಾಹುತವಾಗಿದೆಯೋ ಅಲ್ಲಿಗೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1ಸಾವಿರ ಕೋಟಿ ರೂಪಾಯಿ ಮೀಸಲಿಡುವಂತೆ ಆಗ್ರಹಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಈಗಾಗಲೇ ಜಲಾವೃತವಾಗಿದ್ದು, ಸಿಲ್ಕ್ ಬೋರ್ಡ್ನಲ್ಲಿ ಪ್ರತಿದಿನ ಪ್ರವಾಹ ಉಂಟಾಗುತ್ತಿದೆ ಎಂದು ಹೇಳಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…