Advertisement
MIRROR FOCUS

ಉಗ್ರರ ಅಟ್ಟಹಾಸಕ್ಕೆ ಕೊನೆ ಹಾಡಿದೆ ಬಿಜೆಪಿ ಸರ್ಕಾರ | ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ | ನರೇಂದ್ರ ಮೋದಿ

Share

ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ  ಇದೀಗ  ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement
ಋಷಿಕೇಶದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ದುರ್ಬಲ ಮತ್ತು ಅಸ್ಥಿರ ಸರ್ಕಾರಗಳಿದ್ದಾಗ ಶತ್ರುಗಳು ಲಾಭ ಪಡೆದರು ಮತ್ತು ಭಯೋತ್ಪಾದನೆ (Terrorism) ಹರಡಿತು. ಆದರೆ ಬಲಿಷ್ಠ ಮೋದಿ ಸರ್ಕಾರದ ಅಡಿಯಲ್ಲಿ ನಮ್ಮ ಪಡೆಗಳು ಅವರ ನೆಲದಲ್ಲೇ ಅವರನ್ನು ಹತ್ಯೆ ಮಾಡುತ್ತಿದೆ ಎಂದು ಹೇಳಿದರು.
ಪಾಕಿಸ್ತಾನದಲ್ಲಿ (Pakistan) ಅಡಗಿರುವ ಭಾರತಕ್ಕೆ ಬೇಕಾಗಿರುವ ಉಗ್ರರು ನಿಗೂಢವಾಗಿ ಹತ್ಯೆಯಾಗುತ್ತಿದ್ದು, ಈ ಹತ್ಯೆಗಳ ಹಿಂದೆ ಭಾರತದ ಪಾತ್ರವಿದೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ.  ಭಾರತದಲ್ಲಿ ಸ್ಥಿರ ಸರ್ಕಾರದಿಂದ ಆಗುವ ಪ್ರಯೋಜನಗಳನ್ನು ಜನರು ನೋಡಿರುವುದರಿಂದ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಪ್ರತಿಧ್ವನಿ ದೇಶಾದ್ಯಂತ ಕೇಳಿಬರುತ್ತಿದೆ ಎಂದು ಹೇಳಿದರು.

ಹಿಂದಿನ ದುರ್ಬಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಡಿಯಲ್ಲಿ ಮೂಲಸೌಕರ್ಯವನ್ನು ಬಲಪಡಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಗಡಿಯಲ್ಲಿ ರಸ್ತೆಗಳು ಮತ್ತು ಸುರಂಗಗಳನ್ನು ನಿರ್ಮಿಸಲಾಗುತ್ತಿದೆ ಎಂದು ದೂರಿದರು. ಉತ್ತರಾಖಂಡದ ಪೂಜ್ಯ ದೇವತೆಗಳಾದ ಮಾ ಧಾರಿ ದೇವಿ ಮತ್ತು ಜ್ವಾಲಾ ದೇವಿಯಿಂದ ಸಂಕೇತಿಸಲ್ಪಟ್ಟ ʼಶಕ್ತಿʼ ಅನ್ನು ತೊಡೆದುಹಾಕುವ ಬಗ್ಗೆ ಮಾತನಾಡುವ ಕಾಂಗ್ರೆಸ್‌ಗೆ ಉತ್ತರಾಖಂಡದ ಜನರು ತಕ್ಕ ಉತ್ತರವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

11 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

12 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

12 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

12 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

20 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

21 hours ago