Advertisement
MIRROR FOCUS

ಉಗ್ರರ ಅಟ್ಟಹಾಸಕ್ಕೆ ಕೊನೆ ಹಾಡಿದೆ ಬಿಜೆಪಿ ಸರ್ಕಾರ | ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ | ನರೇಂದ್ರ ಮೋದಿ

Share

ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ  ಇದೀಗ  ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಋಷಿಕೇಶದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ದುರ್ಬಲ ಮತ್ತು ಅಸ್ಥಿರ ಸರ್ಕಾರಗಳಿದ್ದಾಗ ಶತ್ರುಗಳು ಲಾಭ ಪಡೆದರು ಮತ್ತು ಭಯೋತ್ಪಾದನೆ (Terrorism) ಹರಡಿತು. ಆದರೆ ಬಲಿಷ್ಠ ಮೋದಿ ಸರ್ಕಾರದ ಅಡಿಯಲ್ಲಿ ನಮ್ಮ ಪಡೆಗಳು ಅವರ ನೆಲದಲ್ಲೇ ಅವರನ್ನು ಹತ್ಯೆ ಮಾಡುತ್ತಿದೆ ಎಂದು ಹೇಳಿದರು.
ಪಾಕಿಸ್ತಾನದಲ್ಲಿ (Pakistan) ಅಡಗಿರುವ ಭಾರತಕ್ಕೆ ಬೇಕಾಗಿರುವ ಉಗ್ರರು ನಿಗೂಢವಾಗಿ ಹತ್ಯೆಯಾಗುತ್ತಿದ್ದು, ಈ ಹತ್ಯೆಗಳ ಹಿಂದೆ ಭಾರತದ ಪಾತ್ರವಿದೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ.  ಭಾರತದಲ್ಲಿ ಸ್ಥಿರ ಸರ್ಕಾರದಿಂದ ಆಗುವ ಪ್ರಯೋಜನಗಳನ್ನು ಜನರು ನೋಡಿರುವುದರಿಂದ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಪ್ರತಿಧ್ವನಿ ದೇಶಾದ್ಯಂತ ಕೇಳಿಬರುತ್ತಿದೆ ಎಂದು ಹೇಳಿದರು.

ಹಿಂದಿನ ದುರ್ಬಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಡಿಯಲ್ಲಿ ಮೂಲಸೌಕರ್ಯವನ್ನು ಬಲಪಡಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಗಡಿಯಲ್ಲಿ ರಸ್ತೆಗಳು ಮತ್ತು ಸುರಂಗಗಳನ್ನು ನಿರ್ಮಿಸಲಾಗುತ್ತಿದೆ ಎಂದು ದೂರಿದರು. ಉತ್ತರಾಖಂಡದ ಪೂಜ್ಯ ದೇವತೆಗಳಾದ ಮಾ ಧಾರಿ ದೇವಿ ಮತ್ತು ಜ್ವಾಲಾ ದೇವಿಯಿಂದ ಸಂಕೇತಿಸಲ್ಪಟ್ಟ ʼಶಕ್ತಿʼ ಅನ್ನು ತೊಡೆದುಹಾಕುವ ಬಗ್ಗೆ ಮಾತನಾಡುವ ಕಾಂಗ್ರೆಸ್‌ಗೆ ಉತ್ತರಾಖಂಡದ ಜನರು ತಕ್ಕ ಉತ್ತರವನ್ನು ನೀಡಬೇಕೆಂದು ಅವರು ಮನವಿ ಮಾಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

9 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

17 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

18 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

18 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago