Advertisement
Opinion

ಬಿಜೆಪಿ ಸ್ಪಷ್ಟ ಬಹುಮತ ಗಳಿಸಿಲ್ಲ……ಕಾರಣವೇನು..?

Share

ಬಿಜೆಪಿ(BJP) ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ(Power) ಏರಬೇಕಾಗಿತ್ತು. ಕಾರಣ ಬಹಳ ಇತ್ತು, ಆದರೆ 240 ಸೀಟುಗಳನ್ನು ಮಾತ್ರ ಗಳಿಸಿದೆ. ಕಾರಣ‌ ಏನು? ಫಸ್ಟ್ ಆಫ್ ಆಲ್ ಬಿಜೆಪಿ ಸ್ಪರ್ಧಿಸಿದ ಕ್ಷೇತ್ರಗಳೇ ಕೇವಲ 441. ಉಳಿದ 100 ಕ್ಕೂ ಹೆಚ್ಚು ಸ್ಥಾನಗಳನ್ನು ಆಂಧ್ರ ಪ್ರದೇಶದ(Andra Pradesh) ಚಂದ್ರಬಾಬು ನಾಯ್ಡುರ(Chandrababu Naidu) ತೆಲುಗುದೇಶಂ(Telugudesham), ಬಿಹಾರದ(Bihar) ನಿತೀಶ್ ಕುಮಾರ್ ರ(Nitish Kumar) ಜೆಡಿಯು(JDU), ಮಹಾರಾಷ್ಟ್ರದ(Maharashtra) ಏಕನಾಥ ಶಿಂಧೆಯವರ(Ekanath Shinde) ಶಿವಸೇನೆ(ShivSena) ಸೇರಿದಂತೆ ಎನ್.ಡಿ.ಎಯ(NDA) ಇತರ 25 ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿತ್ತು. ಅದರಲ್ಲಿ 50 ಕ್ಕೂ ಹೆಚ್ಚು ಸೀಟುಗಳನ್ನು ಅವು ಗೆದ್ದುಕೊಂಡಿವೆ. (ಗೆಲುವಿನ ಶೇಕಡಾವಾರು (50%)

ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಿದ 441 ಕ್ಷೇತ್ರಗಳಲ್ಲಿ 240 ರಲ್ಲಿ ಗೆದ್ದಿದೆ. (ಗೆಲುವಿನ ಶೇಕಡಾವಾರು 54%) ಅದರಲ್ಲಿ ರಾಜ್ಯವಾರು ಸಾಧನೆ ಹೀಗಿದೆ.. ಮಧ್ಯ ಪ್ರದೇಶ (29/29) ಗುಜರಾತ್ (25/26) ಓಡಿಸಾ (20/21) ದೆಹಲಿ (7/7) ಅಸ್ಸಾಂ (9/11) ಛತ್ತೀಸ್ ಘಡ (10/11) ಉತ್ತರಾಖಂಡ (5/5) ಹಿಮಾಚಲ ಪ್ರದೇಶ (4/4) ಅರುಣಾಚಲ ಪ್ರದೇಶ (2/2) ಜಮ್ಮು ಕಾಶ್ಮೀರ (2/2) ತ್ರಿಪುರಾ‌(2/2) ಅಂಡಾಮಾನ್ (1/1) ಆಲ್ ಮೋಸ್ಟ್ ಆಲ್ ಕ್ಲೀನ್ ಸ್ವೀಪ್! ಕರ್ನಾಟಕ (17/28) ಬಿಹಾರ (12/17) ತೆಲಂಗಾಣ (8/17) ಜಾರ್ಖಂಡ್ (8/13) ಹರ್ಯಾಣ (5/10) ಆಂಧ್ರಪ್ರದೇಶ (3/6) ಇಲ್ಲೂ ಕೂಡಾ ಕಳಪೆ ಸಾಧನೆ ಏನಿಲ್ಲ. ಇನ್ನು ದಾದ್ರಾ (1/2) ಗೋವಾ (1/2) ಚಂಡೀಗಢ (0/1) ಲಡಾಕ್ (0/1) ಮಣಿಪುರ (0/1) ಮಿಜೋರಾಂ (0/1) ಪುದುಚೇರಿ (0/1) ಸಿಕ್ಕಿಂ (0/1) ಸಂಖ್ಯೆಯ ದೃಷ್ಟಿಯಿಂದ ಅಷ್ಟೇನೂ ಮಹತ್ವದ್ದಲ್ಲ. ತಮಿಳುನಾಡು (0/23) ಕೇರಳ (1/16) ಪಂಜಾಬ್ (0/13) ಗಳು ಮುಂಚಿಂದಲೂ ಲಿಸ್ಟ್ ಲಿ ಇರಲಿಲ್ಲ.

ಆದರೆ ಒಳ ಏಟು ಬಿದ್ದಿರುವುದು ಎಲ್ಲಿ ಅಂದರೆ…. ಉತ್ತರ ಪ್ರದೇಶ (33/75) ಪಶ್ಚಿಮ ಬಂಗಾಳ (12/42) ರಾಜಸ್ತಾನ (14/25) ಮಹಾರಾಷ್ಟ್ರ (9/28) ಈ ನಾಲ್ಕೂ ರಾಜ್ಯಗಳ 40 ಸೀಟುಗಳು ಕೈಕೊಟ್ಟವು. ಉತ್ತರ ಪ್ರದೇಶದಲ್ಲಿ ಇನ್ನೂ 20 ಸೀಟುಗಳು ಪಶ್ಚಿಮ ಬಂಗಾಳದಲ್ಲಿ ಇನ್ನೂ 10 ಸೀಟುಗಳು ರಾಜಸ್ತಾನದಲ್ಲಿ ಇನ್ನೂ 5 ಸೀಟುಗಳು ಮಹಾರಾಷ್ಟ್ರದಲ್ಲಿ ಇನ್ನೂ 5 ಸೀಟುಗಳು ಒಟ್ಟು 40 ಸೀಟುಗಳು ಬರಲೇಬೇಕಿತ್ತು. ಈ ನಾಲ್ಕು ರಾಜ್ಯಗಳ ಈ ಒಳ ಏಟಿಗೆ ಕಾರಣವೇನು? ಮುಸ್ಲಿಂ ಮತ ಧ್ರುವೀಕರಣ ಮತ್ತು ಇಂಡಿ ಒಕ್ಕೂಟದ ಕರಾರುವಕ್ಕಾದ ಸೀಟು ಹಂಚಿಕೆ ಲೆಕ್ಕಾಚಾರ ಮತ್ತು ಮೋದಿ ವಿರೋಧೀ ಶಕ್ತಿಗಳ ಒಗ್ಗಟ್ಟನ್ನು ಹೊರತುಪಡಿಸಿಯೂ ಬೇರೆ ಏನೋ ಕಾರಣಗಳು ಇರುವ ಅನುಮಾನ ಬರುತ್ತದೆ.

ಬರಹ :
ನಿತ್ಯಾನಂದ ವಿವೇಕವಂಶಿ
, ಸ್ವತಂತ್ರ ಚಿಂತಕ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

27 minutes ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

11 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

13 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

23 hours ago