Advertisement
Opinion

ಬಿಜೆಪಿ ಸ್ಪಷ್ಟ ಬಹುಮತ ಗಳಿಸಿಲ್ಲ……ಕಾರಣವೇನು..?

Share

ಬಿಜೆಪಿ(BJP) ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ(Power) ಏರಬೇಕಾಗಿತ್ತು. ಕಾರಣ ಬಹಳ ಇತ್ತು, ಆದರೆ 240 ಸೀಟುಗಳನ್ನು ಮಾತ್ರ ಗಳಿಸಿದೆ. ಕಾರಣ‌ ಏನು? ಫಸ್ಟ್ ಆಫ್ ಆಲ್ ಬಿಜೆಪಿ ಸ್ಪರ್ಧಿಸಿದ ಕ್ಷೇತ್ರಗಳೇ ಕೇವಲ 441. ಉಳಿದ 100 ಕ್ಕೂ ಹೆಚ್ಚು ಸ್ಥಾನಗಳನ್ನು ಆಂಧ್ರ ಪ್ರದೇಶದ(Andra Pradesh) ಚಂದ್ರಬಾಬು ನಾಯ್ಡುರ(Chandrababu Naidu) ತೆಲುಗುದೇಶಂ(Telugudesham), ಬಿಹಾರದ(Bihar) ನಿತೀಶ್ ಕುಮಾರ್ ರ(Nitish Kumar) ಜೆಡಿಯು(JDU), ಮಹಾರಾಷ್ಟ್ರದ(Maharashtra) ಏಕನಾಥ ಶಿಂಧೆಯವರ(Ekanath Shinde) ಶಿವಸೇನೆ(ShivSena) ಸೇರಿದಂತೆ ಎನ್.ಡಿ.ಎಯ(NDA) ಇತರ 25 ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿತ್ತು. ಅದರಲ್ಲಿ 50 ಕ್ಕೂ ಹೆಚ್ಚು ಸೀಟುಗಳನ್ನು ಅವು ಗೆದ್ದುಕೊಂಡಿವೆ. (ಗೆಲುವಿನ ಶೇಕಡಾವಾರು (50%)

ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಿದ 441 ಕ್ಷೇತ್ರಗಳಲ್ಲಿ 240 ರಲ್ಲಿ ಗೆದ್ದಿದೆ. (ಗೆಲುವಿನ ಶೇಕಡಾವಾರು 54%) ಅದರಲ್ಲಿ ರಾಜ್ಯವಾರು ಸಾಧನೆ ಹೀಗಿದೆ.. ಮಧ್ಯ ಪ್ರದೇಶ (29/29) ಗುಜರಾತ್ (25/26) ಓಡಿಸಾ (20/21) ದೆಹಲಿ (7/7) ಅಸ್ಸಾಂ (9/11) ಛತ್ತೀಸ್ ಘಡ (10/11) ಉತ್ತರಾಖಂಡ (5/5) ಹಿಮಾಚಲ ಪ್ರದೇಶ (4/4) ಅರುಣಾಚಲ ಪ್ರದೇಶ (2/2) ಜಮ್ಮು ಕಾಶ್ಮೀರ (2/2) ತ್ರಿಪುರಾ‌(2/2) ಅಂಡಾಮಾನ್ (1/1) ಆಲ್ ಮೋಸ್ಟ್ ಆಲ್ ಕ್ಲೀನ್ ಸ್ವೀಪ್! ಕರ್ನಾಟಕ (17/28) ಬಿಹಾರ (12/17) ತೆಲಂಗಾಣ (8/17) ಜಾರ್ಖಂಡ್ (8/13) ಹರ್ಯಾಣ (5/10) ಆಂಧ್ರಪ್ರದೇಶ (3/6) ಇಲ್ಲೂ ಕೂಡಾ ಕಳಪೆ ಸಾಧನೆ ಏನಿಲ್ಲ. ಇನ್ನು ದಾದ್ರಾ (1/2) ಗೋವಾ (1/2) ಚಂಡೀಗಢ (0/1) ಲಡಾಕ್ (0/1) ಮಣಿಪುರ (0/1) ಮಿಜೋರಾಂ (0/1) ಪುದುಚೇರಿ (0/1) ಸಿಕ್ಕಿಂ (0/1) ಸಂಖ್ಯೆಯ ದೃಷ್ಟಿಯಿಂದ ಅಷ್ಟೇನೂ ಮಹತ್ವದ್ದಲ್ಲ. ತಮಿಳುನಾಡು (0/23) ಕೇರಳ (1/16) ಪಂಜಾಬ್ (0/13) ಗಳು ಮುಂಚಿಂದಲೂ ಲಿಸ್ಟ್ ಲಿ ಇರಲಿಲ್ಲ.

ಆದರೆ ಒಳ ಏಟು ಬಿದ್ದಿರುವುದು ಎಲ್ಲಿ ಅಂದರೆ…. ಉತ್ತರ ಪ್ರದೇಶ (33/75) ಪಶ್ಚಿಮ ಬಂಗಾಳ (12/42) ರಾಜಸ್ತಾನ (14/25) ಮಹಾರಾಷ್ಟ್ರ (9/28) ಈ ನಾಲ್ಕೂ ರಾಜ್ಯಗಳ 40 ಸೀಟುಗಳು ಕೈಕೊಟ್ಟವು. ಉತ್ತರ ಪ್ರದೇಶದಲ್ಲಿ ಇನ್ನೂ 20 ಸೀಟುಗಳು ಪಶ್ಚಿಮ ಬಂಗಾಳದಲ್ಲಿ ಇನ್ನೂ 10 ಸೀಟುಗಳು ರಾಜಸ್ತಾನದಲ್ಲಿ ಇನ್ನೂ 5 ಸೀಟುಗಳು ಮಹಾರಾಷ್ಟ್ರದಲ್ಲಿ ಇನ್ನೂ 5 ಸೀಟುಗಳು ಒಟ್ಟು 40 ಸೀಟುಗಳು ಬರಲೇಬೇಕಿತ್ತು. ಈ ನಾಲ್ಕು ರಾಜ್ಯಗಳ ಈ ಒಳ ಏಟಿಗೆ ಕಾರಣವೇನು? ಮುಸ್ಲಿಂ ಮತ ಧ್ರುವೀಕರಣ ಮತ್ತು ಇಂಡಿ ಒಕ್ಕೂಟದ ಕರಾರುವಕ್ಕಾದ ಸೀಟು ಹಂಚಿಕೆ ಲೆಕ್ಕಾಚಾರ ಮತ್ತು ಮೋದಿ ವಿರೋಧೀ ಶಕ್ತಿಗಳ ಒಗ್ಗಟ್ಟನ್ನು ಹೊರತುಪಡಿಸಿಯೂ ಬೇರೆ ಏನೋ ಕಾರಣಗಳು ಇರುವ ಅನುಮಾನ ಬರುತ್ತದೆ.

ಬರಹ :
ನಿತ್ಯಾನಂದ ವಿವೇಕವಂಶಿ
, ಸ್ವತಂತ್ರ ಚಿಂತಕ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

20 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

20 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago