ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.
ಬಿಜೆಪಿಯ ಜನಸಂಕಲ್ಪ ಯಾತ್ರೆ ರಾಯಚೂರು ಜಿಲ್ಲೆಯಿಂದ ಆರಂಭಗೊಂಡು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಸಮಾವೇಶಗಳು ಕೂಡಾ ನಡೆಯಲಿದೆ.
ರಾಯಚೂರಿನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…