Advertisement
ಸುದ್ದಿಗಳು

ಗ್ರಾಮೀಣ ಭಾಗದ ಮನೆ ಧ್ವಂಸಕ್ಕೆ ಯತ್ನ | ಸ್ಥಳಕ್ಕೆ ತೆರಳಿದ ದ ಕ ಜಿಲ್ಲೆಯ ಬಿಜೆಪಿ ಶಾಸಕರು | ಅರಣ್ಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ |

Share
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ದೇವಣ್ಣ ಗೌಡ ಎಂಬವರ ಕುಟುಂಬ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ವೇಳೆ ಆರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿ ಪಡಿಸಿ ಮನೆಯ ಅಡಿಪಾಯ ಕಿತ್ತೆಸದ ಘಟನೆ ಶುಕ್ರವಾರ ನಡೆದಿತ್ತು. ಸೋಮವಾರ ಮತ್ತೆ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಆಗಮಿಸಿ ಮನೆ ತೆರವು ಮಾಡದಂತೆ ತಡೆದರು.
ಶುಕ್ರವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ  ಬೆಳ್ತಂಗಡಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಸಚಿವರ ಜೊತೆ ಫೋನ್ ಮಾತನಾಡಿದ್ದರು. ಮುಂದೆ ಸರ್ವೆ ನಡೆಸಿ ಕ್ರಮ ಕೈಗೊಳ್ಳುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿತ್ತು.
ಆದರೆ ಸೋಮವಾರ(ಅ.9) ಬೆಳಗ್ಗೆ, ಮತ್ತೆ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್‌ , ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ಕ್ಷೇತ್ರ ಶಾಸಕ ಭರತ್ ಶೆಟ್ಟಿ ಮೊದಲಾದ ಬಿಜೆಪಿ ನಾಯಕರು ಆಗಮಿಸಿ ಮನೆ ತೆರವುಗೊಳಿಸದಂತೆ ತಡೆದರು. ಯಾವುದೇ ಕಾರಣಕ್ಕೂ ಮನೆ ಕೆಡವಲು ಬಿಡುವುದಿಲ್ಲ, ಜಾಗದ ಅಳತೆ ಮಾಡಿ ಅಧಿಕೃತ ದಾಖಲೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇಂತಹ ಘಟನೆಗೆ ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕಳೆಂಜದ ದೇವಣ್ಣ ಗೌಡ ಅವರ  ಕುಟುಂಬ ವಾಸಿಸುತ್ತಿದೆ. ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ ಒರಟು ರೀತಿಯಲ್ಲಿ ನಡೆದುಕೊಂಡದ್ದೇ ಆದಲ್ಲಿ ಜನರ ಪ್ರತಿಕ್ರಿಯೆಯು ಯಾವ ರೂಪದಲ್ಲಿ ಇರಬಹುದು ಎಂಬುದು ಊಹಿಸಲಸಾಧ್ಯ. ಮುಂದಿನ ಎಲ್ಲಾ ಆಗುಹೋಗುಗಳಿಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಶಾಸಕ ಹರೀಶ್‌ ಪೂಂಜಾ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

51 minutes ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

6 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

14 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

14 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

14 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

23 hours ago