Advertisement
ಸುದ್ದಿಗಳು

ಗ್ರಾಮೀಣ ಭಾಗದ ಮನೆ ಧ್ವಂಸಕ್ಕೆ ಯತ್ನ | ಸ್ಥಳಕ್ಕೆ ತೆರಳಿದ ದ ಕ ಜಿಲ್ಲೆಯ ಬಿಜೆಪಿ ಶಾಸಕರು | ಅರಣ್ಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ |

Share
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ದೇವಣ್ಣ ಗೌಡ ಎಂಬವರ ಕುಟುಂಬ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ವೇಳೆ ಆರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿ ಪಡಿಸಿ ಮನೆಯ ಅಡಿಪಾಯ ಕಿತ್ತೆಸದ ಘಟನೆ ಶುಕ್ರವಾರ ನಡೆದಿತ್ತು. ಸೋಮವಾರ ಮತ್ತೆ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಆಗಮಿಸಿ ಮನೆ ತೆರವು ಮಾಡದಂತೆ ತಡೆದರು.
ಶುಕ್ರವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ  ಬೆಳ್ತಂಗಡಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಸಚಿವರ ಜೊತೆ ಫೋನ್ ಮಾತನಾಡಿದ್ದರು. ಮುಂದೆ ಸರ್ವೆ ನಡೆಸಿ ಕ್ರಮ ಕೈಗೊಳ್ಳುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿತ್ತು.
ಆದರೆ ಸೋಮವಾರ(ಅ.9) ಬೆಳಗ್ಗೆ, ಮತ್ತೆ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್‌ , ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ಕ್ಷೇತ್ರ ಶಾಸಕ ಭರತ್ ಶೆಟ್ಟಿ ಮೊದಲಾದ ಬಿಜೆಪಿ ನಾಯಕರು ಆಗಮಿಸಿ ಮನೆ ತೆರವುಗೊಳಿಸದಂತೆ ತಡೆದರು. ಯಾವುದೇ ಕಾರಣಕ್ಕೂ ಮನೆ ಕೆಡವಲು ಬಿಡುವುದಿಲ್ಲ, ಜಾಗದ ಅಳತೆ ಮಾಡಿ ಅಧಿಕೃತ ದಾಖಲೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇಂತಹ ಘಟನೆಗೆ ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕಳೆಂಜದ ದೇವಣ್ಣ ಗೌಡ ಅವರ  ಕುಟುಂಬ ವಾಸಿಸುತ್ತಿದೆ. ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ ಒರಟು ರೀತಿಯಲ್ಲಿ ನಡೆದುಕೊಂಡದ್ದೇ ಆದಲ್ಲಿ ಜನರ ಪ್ರತಿಕ್ರಿಯೆಯು ಯಾವ ರೂಪದಲ್ಲಿ ಇರಬಹುದು ಎಂಬುದು ಊಹಿಸಲಸಾಧ್ಯ. ಮುಂದಿನ ಎಲ್ಲಾ ಆಗುಹೋಗುಗಳಿಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಶಾಸಕ ಹರೀಶ್‌ ಪೂಂಜಾ ಪ್ರತಿಕ್ರಿಯೆ ನೀಡಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago