Advertisement
ಸುದ್ದಿಗಳು

ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್​ನಲ್ಲೂ 7 ಹಾಲಿ ಶಾಸಕರಿಗೆ ಟಿಕೆಟ್ ಮಿಸ್​ | ಯಾರಿಗೆಲ್ಲಾ ಸಿಗಲಿಲ್ಲ ಟಿಕೆಟ್…?

Share

​ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ 2ನೇ ಲಿಸ್ಟ್​ ಬಿಡುಗಡೆ ಮಾಡಿದ್ದು, 23 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಈ ಲಿಸ್ಟ್​ನಲ್ಲೂ 7 ಹಾಲಿ ಶಾಸಕರಿಗೆ ಟಿಕೆಟ್​ ಕೈತಪ್ಪಿದೆ. ಮೊದಲ ಲಿಸ್ಟ್​ನಲ್ಲೂ 9 ಹಾಲಿ ಶಾಸಕರಿಗೆ ಟಿಕೆಟ್​ ನೀಡಿರಲಿಲ್ಲ. ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ಹಾವೇರಿ ಶಾಸಕ ನೆಹರೂ ಓಲೇಕಾರ್​ ಸೇರಿದಂತೆ 7 ಹಾಲಿ ಶಾಸಕರಿಗೆ ಟಿಕೆಟ್​ ಕೈತಪ್ಪಿದೆ. ಇನ್ನು ಬಿಜೆಪಿ ಹಿರಿಯ ನಾಯಕ ಜಗದೀಶ್​ ಶೆಟ್ಟರ್​ ಹೆಸರು ಪಟ್ಟಿಯಲ್ಲಿ ಇಲ್ಲದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಗೋವಿಂದರಾಜ, ಹೆಬ್ಬಾಳ, ಮಹದೇವಪುರ ಕ್ಷೇತ್ರಗಳ ಟಿಕೆಟ್​ ಕೂಡ ಘೋಷಣೆಯಾಗಿಲ್ಲ. ಮಂಗಳವಾರ ಬಾಕಿ ಉಳಿಸಿಕೊಂಡಿದ್ದ 35 ಕ್ಷೇತ್ರಗಳ ಪೈಕಿ  23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ. ಇನ್ನೂ 12 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಬಹಿರಂಗವಾಗಿಲ್ಲ.

ಬಿಜೆಪಿ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿತ್ತು. ಅದರಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಒಬಿಸಿಯ 32, ಎಸ್​ಸಿ 30, ಎಸ್​ಟಿ 16 ಹಾಗೂ 9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಟಿಕೆಟ್ ನೀಡಲಾಗಿತ್ತು. ಇದೀಗ 2ನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ಟಿಕೆಟ್ ಫೈನಲ್ ಆಗದ ಕ್ಷೇತ್ರಗಳು: ನಾಗಠಾಣಾ, ಸೇಡಂ, ಮಾನ್ವಿ, ಕೊಪ್ಪಳ, ರೋಣ, ಹುಬ್ಬಳ್ಳಿ ಧಾರವಾಡ ಕೇಂದ್ರ, ಹಗರಿ ಬೊಮ್ಮನಹಳ್ಳಿ, ಶಿವಮೊಗ್ಗ ನಗರ, ಹೆಬ್ಬಾಳ, ಗೋವಿಂದರಾಜನಗರ, ಕೃಷ್ಣರಾಜ, ಮಹದೇವಪುರ, ಕ್ಷೇತ್ರ ಬಾಕಿ ಉಳಿದಿವೆ. ಇದರಲ್ಲೂ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ.

ಟಿಕೆಟ್ ವಂಚಿತ ಹಾಲಿ ಶಾಸಕರು:

ಮೂಡಿಗೆರೆ -ಎಂಪಿ ಕುಮಾರಸ್ವಾಮಿ ಬದಲಿಗೆ ದೀಪಕ್​ ದೊಡ್ಡಯ್ಯಗೆ ಟಿಕೆಟ್​

ಚೆನ್ನಗಿರಿ- ಮಾಡಾಳ್ ವಿರೂಪಾಕ್ಷಪ್ಪ ಬದಲಿಗೆ ಶಿವಕುಮಾರ್​ಗೆ ಟಿಕೆಟ್​

ಬೈಂದೂರು-ಸುಕುಮಾರ್ ಶೆಟ್ಟಿ ಬದಲಿಗೆ ಗುರುರಾಜ್​ಗೆ ಟಿಕೆಟ್​

ಕಲಘಟಗಿ- ನಿಂಬಣ್ಣನವರ್​ ಬದಲಿಗೆ ನಾಗರಾಜ್​ ಛಬ್ಬಿಗೆ ಟಿಕೆಟ್

ಮಾಯಕೊಂಡ- ಎನ್. ಲಿಂಗಣ್- ಬಸವರಾಜ್ ನಾಯ್ಕ್​ಗೆ ಟಿಕೆಟ್ ಸಿಕ್ಕಿದೆ

ದಾವಣಗೆರೆ ಉತ್ತರ :  ಎಸ್ ಎ ರವೀಂದ್ರನಾಥ್ ಬದಲಿಗೆ ನಾಗರಾಜ್​ ಲೋಕಿಕೆರೆಗೆ ಟಿಕೆಟ್​

2ನೇ ಲಿಸ್ಟ್​ನಲ್ಲಿ ಟಿಕೆಟ್​ ಪಡೆದವರು

ದೇವರಹಿಪ್ಪರಗಿ-ಸೋಮನಗೌಡ ಪಾಟೀಲ್

ಬಸವನಬಾಗೇವಾಡಿ -ಎಸ್ .ಕೆ.ಬೆಳ್ಳುಬ್ಬಿ

ಇಂಡಿ-ಕಾಸಗೌಡ ಬಿರಾದಾರ್

ಗುರುಮಿಠಕಲ್-ಲಲಿತ ಅನಪೂರ್

ಬೀದರ್-ಈಶ್ವರ್ ಸಿಂಗ್ ಠಾಕೂರ್

ಭಾಲ್ಕಿ -ಪ್ರಕಾಶ್ ಖಂಡ್ರೆ

ಗಂಗಾವತಿ -ಪರಣ್ಣ ಮುನವಳ್ಳಿ

ಕಲಘಟಗಿ-ನಾಗರಾಜ್ ಛಬ್ಬಿ

ಹಾನಗಲ್-ಶಿವರಾಜ್ ಸಜ್ಜನರ್

ಹಾವೇರಿ -ಗವಿಸಿದ್ದಪ್ಪ ದ್ಯಾಮಣ್ಣ ನವರ್

ಹರಪನಹಳ್ಳಿ-ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ-ಲೋಕೀಕೆರೆ ನಾಗರಾಜ್

ದಾವಣಗೆರೆ ದಕ್ಷಿಣ-ಅಜಯ್ ಕುಮಾರ್

ಮಾಯಕೊಂಡ -ಬಸವರಾಜ್ ನಾಯ್ಕ್

ಚನ್ನಗಿರಿ-ಶಿವಕುಮಾರ್

ಬೈಂದೂರು -ಗುರುರಾಜ್ ಗಂಟಿಹೊಳೆ

ಮೂಡಿಗೆರೆ-ದೀಪಕ್ ದೊಡ್ಡಯ್ಯ

ಗುಬ್ಬಿ -ಎಸ್.ಡಿ.ದಿಲೀಪ್ ಕುಮಾರ್

ಶಿಡ್ಲಘಟ್ಟ- ರಾಮಚಂದ್ರ ಗೌಡ

ಕೆಜಿಎಫ್ -ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ -ಚಿದಾನಂದ

ಅರಸೀಕೆರೆ-ಜಿ.ಬಿ.ಬಸವರಾಜು

ಹೆಗ್ಗಡದೇವನಕೋಟೆ-ಕೃಷ್ಣ ನಾಯ್ಕ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

13 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

14 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

16 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

16 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago