Advertisement
ಪ್ರಮುಖ

ಕೊನೆಗೂ ತೆರೆಬಿತ್ತು ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಸಂಗ…! | ನೂತನ ಸಾರಥಿಯಾಗಿ ಯುವ ನಾಯಕ ಬಿ.ವೈ ವಿಜಯೇಂದ್ರ ಆಯ್ಕೆ | ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ

Share

ಭಾರತೀಯ ಜನತಾ ಪಾರ್ಟಿ(BJP) ಕೊನೆಗೂ ರಾಜ್ಯದ ಸಾರಥಿಯ ಆಯ್ಕೆಯನ್ನು ಮಾಡಿದೆ. ಸುಮಾರು 4-5 ತಿಂಗಳುಗಳ ಕಾಲ ಬಿಜೆಪಿ ಹೈಕಮಾಂಡ್‌(High commond) ಅಳೆದು ತೂಗಿ ಯುವ ನಾಯಕನಿಗೆ ಕರ್ನಾಟಕದ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷನ(State BJP President) ಪಟ್ಟವನ್ನು ನೀಡಿದೆ. ಈ ಮೂಲಕ ಬಿಜೆಪಿಯಲ್ಲಿ ಯುವಕರಿಗೆ ಮನ್ನಣೆ ನೀಡಲಾಗಿದೆ. ನಿನ್ನೆ ಸಂಜೆ ದೆಹಲಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇಂದು ಮಾತನಾಡಿದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮಾತನಾಡಿ, ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಯಡಿಯೂರಪ್ಪ (BS Yediyurappa) ಅವರು ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದರು. ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ. ದೆಹಲಿಯಿಂದ ವೀಕ್ಷಕರು ಬರಲಿದ್ದಾರೆ. ಸೋಮಣ್ಣ, ಅಶೋಕ್, ಯತ್ನಾಳ್,  ಬೊಮ್ಮಾಯಿ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ತಮ್ಮ ಎಕ್ಸ್ ಖಾತೆಯಲ್ಲಿ( ಟ್ವಿಟ್ಟರ್) ಬರೆದುಕೊಂಡಿರುವ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.

The new BJP state president BY Vijayendra said that the legislative session will be held next Friday, during which the leader of the opposition will be elected. Speaking to reporters, he said that the opposition leader will be selected after taking the opinion of the MLAs. BS Yediyurappa said he had discussed with Nadda.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago