Advertisement
MIRROR FOCUS

3ನೇ ಅವಧಿಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ | ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ | ಮೋದಿ ಭರವಸೆ

Share

ಇನ್ನೇನು 2-3 ತಿಂಗಳು ಮಾತ್ರ ಹೈ ವೋಲ್ಟೇಜ್‌ ಲೋಕಸಭೆ ಚುನಾವಣೆಗೆ(Lokasabha Election). ದೇಶ ಮಾತ್ರವಲ್ಲ ಇಡೀ ವಿಶ್ವವಕ್ಕೇ ಭಾರತದ ಲೋಕಸಭೆ ಚುನಾವಣೆ ಬಗ್ಗೆ ಕುತೂಹಲ ಇದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಬಿಜೆಪಿ (BJP) ನೇತೃತ್ವದ ಎನ್‌ಡಿಎ(NDA) ಸರ್ಕಾರದ 3ನೇ ಅವಧಿಯಲ್ಲಿ ದೇಶವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 2014-15ರ ಮಧ್ಯಂತರ ಬಜೆಟ್ ಮಂಡಿಸಿದ ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ ಅವರು ಹಳೆಯ ಪಕ್ಷ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು 11ನೇ ಸ್ಥಾನಕ್ಕೆ ಹೆಮ್ಮ ಪಡುತ್ತಿದ್ದಾರೆ. ನಾವು ಐದನೇ ಸ್ಥಾನಕ್ಕೆ ಬಂದಿದ್ದೇವೆ. ನೀವು ಹನ್ನೊಂದು ಸ್ಥಾನಕ್ಕೆ ಬಂದಾಗ ಖುಷಿಪಡುತ್ತಿದ್ರಿ. ಈಗ ಐದನೇ ಸ್ಥಾನಕ್ಕೆ ಬಂದಾಗಲೂ ಖುಷಿಪಡಬೇಕು ಎಂದು ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇಂದು ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಆದರೆ ಅವರು (ಕಾಂಗ್ರೆಸ್) ಮೌನವಾಗಿದ್ದಾರೆ. 30 ವರ್ಷಗಳಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂಬ ದೃಷ್ಟಿಯನ್ನು ಅವರು ಕಂಡಿದ್ದಾರೆ. ರಾಷ್ಟ್ರವನ್ನು ಇಷ್ಟು ದಿನ ಕಾಯಲು ನಾವು ಬಿಡುವುದಿಲ್ಲ. ನಮ್ಮ ಮೂರನೇ ಅವಧಿಯಲ್ಲಿ ಭಾರತ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ. ಇದು ಮೋದಿ ಗ್ಯಾರಂಟಿ ಎಂದು ತಿಳಿಸಿದ್ದಾರೆ.

ಬಡವರಿಗೆ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನಗರದ ಬಡವರಿಗೆ 80 ಲಕ್ಷ ಪಕ್ಕಾ ಮನೆಗಳನ್ನು ನಿರ್ಮಿಸಿದ್ದೇವೆ. ಕಾಂಗ್ರೆಸ್‌ನ ವೇಗಕ್ಕೆ ಹೋಲಿಸಿದರೆ, ಈ ಕೆಲಸ ಮಾಡಲು 100 ವರ್ಷ ಬೇಕಾಗುತ್ತಿತ್ತು. ಆಗ ಐದು ತಲೆಮಾರುಗಳು ಕಳೆದು ಹೋಗುತ್ತಿದ್ದವು ಎಂದು ಲೇವಡಿ ಮಾಡಿದ್ದಾರೆ.

  • ಅಂತರ್ಜಾಲ ಮಾಹಿತಿ

Prime Minister Narendra Modi has expressed hope that the country will become the third largest economy in the third term of the BJP-led NDA government. Speaking during the vote of thanks to the President’s speech in the Lok Sabha, Prime Minister Modi lashed out at the Congress.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

23 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago