ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ, ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂವರ ಹೆಸರಿರುವ ಪಟ್ಟಿಯನ್ನು ರಾಜ್ಯ ಬಿಜೆಪಿ ಕಳುಹಿಸಿದ್ದು, ಈ ಪಟ್ಟಿ ಕುರಿತು ಕೇಂದ್ರ ಚುನಾವಣಾ ಸಮಿತಿ ಪರಿಶೀಲನೆ ನಡೆಸಲಿದೆ. ಬಳಿಕ ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಏಪ್ರಿಲ್ 4 ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯಾ, ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಮಾಜಿ ಉಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಕಿರುಪಟ್ಟಿ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್,…
ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…