Advertisement
ಸುದ್ದಿಗಳು

ಇಂದು, ನಾಳೆ ಬಿಜೆಪಿಯಿಂದ ಮಹಾ ಪ್ರಚಾರ ಅಭಿಯಾನ : ಭರ್ಜರಿಯಾಗಿ ನಡೆದ ಮಹಾಪ್ರಚಾರ ಅಭಿಯಾನ

Share

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿಯು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ‘ವಿಶೇಷ ಮಹಾಪ್ರಚಾರ ಅಭಿಯಾನ’ ಹಮ್ಮಿಕೊಂಡಿದೆ.

ಈ ಮಹಾಪ್ರಚಾರ ಅಭಿಯಾನದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಧರ್ಮೆಂದ್ರ ಪ್ರಧಾನ್‌, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಮನಸುಖ್‌ ಮಾಂಡವೀಯ ಸೇರಿದಂತೆ 98 ಮಂದಿ ಕೇಂದ್ರ ಸಚಿವರು, ನಾಯಕರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ನಗರ ಸಭೆ ಅಧ್ಯಕ್ಷರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಏಕಕಾಲಕ್ಕೆ ಏಕ ಪ್ರಕಾರವಾಗಿ ಈ ಮಹಾಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ 150 ರಾಜ್ಯ ನಾಯಕರು ಮತ್ತು 98 ಕೇಂದ್ರ ನಾಯಕರು ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮಹಾಪ್ರಚಾರ ಅಭಿಯಾನ ಬೆಳಗ್ಗೆಯಿಂದ ಸಂಜೆವರೆಗೆ ನಡೆಯಲಿದೆ. ಒಂದು ಪ್ರತಿಕಾಗೋಷ್ಠಿ, ಹೋಬಳಿ, ತಾಲೂಕು ಕೇಂದ್ರಗಳಲ್ಲಿ ರೋಡ್‌ ಶೋ, ಸಾರ್ವಜನಿಕ ಸಭೆ, ಮನೆ-ಮನೆಗೆ ಭೇಟಿ ನೀಡಿ ಮತಯಾಚನೆ, ಕಾರ್ಯಕರ್ತರು, ಸಮುದಾಯದ ಮುಖಂಡರು, ವಿವಿಧ ಯೋಜನೆಗಳ ಫಲಾನುಭವಿಗಳ ಸಭೆ ಇರಲಿದೆ. ಇದೇ ವೇಳೆ ನಮ್ಮ ಅಭ್ಯರ್ಥಿಗಳು ಅವರ ಕ್ಷೇತ್ರದ ವ್ಯಾಪ್ತಿಯ ಮಹಾಪುರುಷರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ದೇವಸ್ಥಾನ-ಮಠಮಾನ್ಯಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಟೀಲ್ ವಿವರಿಸಿದರು.

ನಮ್ಮದು ಕಾರ್ಯಕರ್ತರ ಪಕ್ಷವಾಗಿದ್ದು, ಈ ಎರಡು ದಿನಗಳ ಮಹಾಪ್ರಚಾರ ಅಭಿಯಾನವನ್ನು ಯಶಸ್ವಿಗೊಳಿಸಲಿದ್ದೇವೆ ಎಂದು ಕಟೀಲ್‌ ತಿಳಿಸಿದರು. ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

18 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago