Advertisement
Opinion

ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ

Share

ಈಗಾಗಲೇ ಲೋಕಸಭೆ ಚುನಾವಣೆಯ(Lok sabha Election-2024) ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನುಳಿದ ಭಾಗಗಳಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕರ್ನಾಟಕದಲ್ಲಿ(Karnataka) ಮೊದಲ ಹಂತದ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಇದೆ. ಚುನಾವಣೆ ಮುನ್ನವೇ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ, ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಬಿಜೆಪಿ(BJP) ಸ್ವತಂತ್ರವಾಗಿ ಕನಿಷ್ಠ 330 ರಿಂದ 350 ಸೀಟು ಗೆಲ್ಲುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ (Surjit Bhalla) ಭವಿಷ್ಯ ನುಡಿದಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ 2019ಕ್ಕಿಂತಲೂ ಉತ್ತಮ ಫಲಿತಾಂಶ ಬರಲಿದೆ. 2019ರಲ್ಲಿ ಬಿಜೆಪಿ 303 ಕಾಂಗ್ರೆಸ್‌ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಎನ್‌ಡಿಎ ಹೊರತುಪಡಿಸಿ, ಬಿಜೆಪಿಯೇ ಸ್ವತಂತ್ರವಾಗಿ 330 ರಿಂದ 350 ಸ್ಥಾನಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ (Tamil Nadu) ಕನಿಷ್ಠ 5 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

Advertisement

ಸದ್ಯದಲ್ಲಿ ಜನರ ಮನಸ್ಥಿತಿ ಬಿಜೆಪಿ ಕಡೆಗೆ ವಾಲಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಚಾರ ಜನರ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ 2019ರ ಫಲಿತಾಂಶಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ. ಕೇರಳದಲ್ಲಿ ಬಹುಶಃ ಒಂದು ಅಥವಾ ಎರಡು ಸ್ಥಾನಗಳಲ್ಲಿ ಗೆಲ್ಲಬಹುದು. ಇನ್ನೂ 2019ರ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 44 ಸ್ಥಾನಗಳಿಗೆ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಬಾರಿ ಬಿಜೆಪಿ ದೇಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಅದಕ್ಕೆ ಕಾರಣವೂ ಇದೆ. ಇಂದಿನ ಜನ ಜೀವನ ಮಟ್ಟ ಸಾಕಷ್ಟು ಸುಧಾರಣೆ ಕಂಡಿದೆ. ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಬಹಳಷ್ಟು ಸಂಖ್ಯೆಯ ಜನ ಬಡತನದಿಂದ ಹೊರಬಂದಿದ್ದಾರೆ. ಜೊತೆಗೆ 2019ಕ್ಕಿಂತಲೂ ಮುಂಚೆ ಇದ್ದ ನಿರುದ್ಯೋಗಿಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಕಳೆದ 10 ವರ್ಷಗಳಲ್ಲಿ ಈ ಬೆಳವಣಿಗೆಯಾಗಿದೆ, ಈ ಎಲ್ಲ ಕಾರಣಗಳಿಂದ ಬಿಜೆಪಿ ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

16 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

16 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago