Advertisement
Opinion

ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ

Share

ಈಗಾಗಲೇ ಲೋಕಸಭೆ ಚುನಾವಣೆಯ(Lok sabha Election-2024) ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನುಳಿದ ಭಾಗಗಳಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕರ್ನಾಟಕದಲ್ಲಿ(Karnataka) ಮೊದಲ ಹಂತದ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಇದೆ. ಚುನಾವಣೆ ಮುನ್ನವೇ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ, ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಬಿಜೆಪಿ(BJP) ಸ್ವತಂತ್ರವಾಗಿ ಕನಿಷ್ಠ 330 ರಿಂದ 350 ಸೀಟು ಗೆಲ್ಲುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ (Surjit Bhalla) ಭವಿಷ್ಯ ನುಡಿದಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ 2019ಕ್ಕಿಂತಲೂ ಉತ್ತಮ ಫಲಿತಾಂಶ ಬರಲಿದೆ. 2019ರಲ್ಲಿ ಬಿಜೆಪಿ 303 ಕಾಂಗ್ರೆಸ್‌ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಎನ್‌ಡಿಎ ಹೊರತುಪಡಿಸಿ, ಬಿಜೆಪಿಯೇ ಸ್ವತಂತ್ರವಾಗಿ 330 ರಿಂದ 350 ಸ್ಥಾನಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ (Tamil Nadu) ಕನಿಷ್ಠ 5 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸದ್ಯದಲ್ಲಿ ಜನರ ಮನಸ್ಥಿತಿ ಬಿಜೆಪಿ ಕಡೆಗೆ ವಾಲಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಚಾರ ಜನರ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ 2019ರ ಫಲಿತಾಂಶಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ. ಕೇರಳದಲ್ಲಿ ಬಹುಶಃ ಒಂದು ಅಥವಾ ಎರಡು ಸ್ಥಾನಗಳಲ್ಲಿ ಗೆಲ್ಲಬಹುದು. ಇನ್ನೂ 2019ರ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 44 ಸ್ಥಾನಗಳಿಗೆ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಬಾರಿ ಬಿಜೆಪಿ ದೇಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಅದಕ್ಕೆ ಕಾರಣವೂ ಇದೆ. ಇಂದಿನ ಜನ ಜೀವನ ಮಟ್ಟ ಸಾಕಷ್ಟು ಸುಧಾರಣೆ ಕಂಡಿದೆ. ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಬಹಳಷ್ಟು ಸಂಖ್ಯೆಯ ಜನ ಬಡತನದಿಂದ ಹೊರಬಂದಿದ್ದಾರೆ. ಜೊತೆಗೆ 2019ಕ್ಕಿಂತಲೂ ಮುಂಚೆ ಇದ್ದ ನಿರುದ್ಯೋಗಿಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಕಳೆದ 10 ವರ್ಷಗಳಲ್ಲಿ ಈ ಬೆಳವಣಿಗೆಯಾಗಿದೆ, ಈ ಎಲ್ಲ ಕಾರಣಗಳಿಂದ ಬಿಜೆಪಿ ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

7 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

7 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

7 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

8 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

20 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago