Advertisement
Opinion

ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ

Share

ಈಗಾಗಲೇ ಲೋಕಸಭೆ ಚುನಾವಣೆಯ(Lok sabha Election-2024) ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನುಳಿದ ಭಾಗಗಳಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕರ್ನಾಟಕದಲ್ಲಿ(Karnataka) ಮೊದಲ ಹಂತದ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಇದೆ. ಚುನಾವಣೆ ಮುನ್ನವೇ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ, ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಬಿಜೆಪಿ(BJP) ಸ್ವತಂತ್ರವಾಗಿ ಕನಿಷ್ಠ 330 ರಿಂದ 350 ಸೀಟು ಗೆಲ್ಲುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ (Surjit Bhalla) ಭವಿಷ್ಯ ನುಡಿದಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ 2019ಕ್ಕಿಂತಲೂ ಉತ್ತಮ ಫಲಿತಾಂಶ ಬರಲಿದೆ. 2019ರಲ್ಲಿ ಬಿಜೆಪಿ 303 ಕಾಂಗ್ರೆಸ್‌ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಎನ್‌ಡಿಎ ಹೊರತುಪಡಿಸಿ, ಬಿಜೆಪಿಯೇ ಸ್ವತಂತ್ರವಾಗಿ 330 ರಿಂದ 350 ಸ್ಥಾನಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ (Tamil Nadu) ಕನಿಷ್ಠ 5 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸದ್ಯದಲ್ಲಿ ಜನರ ಮನಸ್ಥಿತಿ ಬಿಜೆಪಿ ಕಡೆಗೆ ವಾಲಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಚಾರ ಜನರ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ 2019ರ ಫಲಿತಾಂಶಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ. ಕೇರಳದಲ್ಲಿ ಬಹುಶಃ ಒಂದು ಅಥವಾ ಎರಡು ಸ್ಥಾನಗಳಲ್ಲಿ ಗೆಲ್ಲಬಹುದು. ಇನ್ನೂ 2019ರ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 44 ಸ್ಥಾನಗಳಿಗೆ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಬಾರಿ ಬಿಜೆಪಿ ದೇಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಅದಕ್ಕೆ ಕಾರಣವೂ ಇದೆ. ಇಂದಿನ ಜನ ಜೀವನ ಮಟ್ಟ ಸಾಕಷ್ಟು ಸುಧಾರಣೆ ಕಂಡಿದೆ. ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಬಹಳಷ್ಟು ಸಂಖ್ಯೆಯ ಜನ ಬಡತನದಿಂದ ಹೊರಬಂದಿದ್ದಾರೆ. ಜೊತೆಗೆ 2019ಕ್ಕಿಂತಲೂ ಮುಂಚೆ ಇದ್ದ ನಿರುದ್ಯೋಗಿಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಕಳೆದ 10 ವರ್ಷಗಳಲ್ಲಿ ಈ ಬೆಳವಣಿಗೆಯಾಗಿದೆ, ಈ ಎಲ್ಲ ಕಾರಣಗಳಿಂದ ಬಿಜೆಪಿ ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

22 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

23 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago