ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ಅವರು ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್ ಸಂತೋಷ್, ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಭಾನುಪ್ರಕಾಶ್, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…