ಸುದ್ದಿಗಳು

ಬಿಜೆಪಿಯು ಸರ್ವವ್ಯಾಪಿ, ಸರ್ವಸ್ಪರ್ಶಿ, ಸರ್ವಗ್ರಾಹಿಯಾಗಿ ಬೆಳೆಯಬೇಕು – ಬಿ ಎಲ್‌ ಸಂತೋಷ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್‌ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಹೇಳಿದರು.

Advertisement

ಅವರು ಶನಿವಾರ ಮಂಗಳೂರಿನಲ್ಲಿ  ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ  ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್‌ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್‌ ಸಂತೋಷ್‌,  ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವರುಗಳಾದ ಎಸ್‌ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್‌ ಮೂಡಬಿದ್ರೆ, ಭಾನುಪ್ರಕಾಶ್‌, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…

52 seconds ago

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?

ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…

14 minutes ago

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…

35 minutes ago

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

10 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

10 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

10 hours ago