ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ಅವರು ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್ ಸಂತೋಷ್, ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಭಾನುಪ್ರಕಾಶ್, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…