ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ಅವರು ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್ ಸಂತೋಷ್, ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಭಾನುಪ್ರಕಾಶ್, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…