ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ಅವರು ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್ ಸಂತೋಷ್, ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಭಾನುಪ್ರಕಾಶ್, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…