Advertisement
ಸುದ್ದಿಗಳು

ಬಿಜೆಪಿಯು ಸರ್ವವ್ಯಾಪಿ, ಸರ್ವಸ್ಪರ್ಶಿ, ಸರ್ವಗ್ರಾಹಿಯಾಗಿ ಬೆಳೆಯಬೇಕು – ಬಿ ಎಲ್‌ ಸಂತೋಷ್

Share

 ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್‌ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಹೇಳಿದರು.

ಅವರು ಶನಿವಾರ ಮಂಗಳೂರಿನಲ್ಲಿ  ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ  ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್‌ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್‌ ಸಂತೋಷ್‌,  ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಸಚಿವರುಗಳಾದ ಎಸ್‌ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್‌ ಮೂಡಬಿದ್ರೆ, ಭಾನುಪ್ರಕಾಶ್‌, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

9 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

13 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago