ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ಅವರು ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್ ಸಂತೋಷ್, ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಭಾನುಪ್ರಕಾಶ್, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…