ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿದರು.
ಅವರು ಶನಿವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಪ್ರಕೋಷ್ಟಗಳ ಎರಡು ದಿನಗಳ ಚಿಂತನಾ ವರ್ಗದ ಸಮಾರೋಪ ಭಾಷಣ ಮಾಡಿದರು. ಇಂದು ರಾಜ್ಯದಲ್ಲಿ ರಾಜಕೀಯ ಚರ್ಚೆಯ ಮಟ್ಟ ಏರಿಸಬೇಕಿದೆ. ಏಕವಚನ ಸಹಿತ ಭಾಷೆಯ ಮೇಲೆ ಹಿಡಿತ ಇಟ್ಟುಕೊಂಡು ಪ್ರತಿಪಕ್ಷದ ವಿರುದ್ಧ ಮಾತನಾಡಬೇಕು. ಬಿಜೆಪಿಯಲ್ಲಿ ಪರಿಶ್ರಮದ ಮೇಲೆ ಅರ್ಹತೆಗಳು ಲಭ್ಯವಾಗುತ್ತಿದೆ. ಹೀಗಾಗಿ ಈಗ ಸಾಮಾನ್ಯ ಜನರೂ ಕೂಡಾ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ, ಪ್ರಧಾನಿಗಳ ಕೆಲಸದ ಮೇಲೆಯೇ ಗ್ರಾಪಂ, ಕಾರ್ಪೋರೇಟರ್ ಕೆಲಸವನ್ನೂ ತುಲನೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹುದ್ದೆಗಳನ್ನೂ, ಸ್ಥಾನಮಾನಗಳನ್ನೂ ಸರಿಯಾಗಿ ನಿರ್ವಹಣೆ ಮಾಡುವ ಮಂದಿಯ ಅಗತ್ಯವಿದೆ ಎಂದ ಬಿ ಎಲ್ ಸಂತೋಷ್, ಕಾರ್ಯಕರ್ತರೆಲ್ಲರೂ ಅಂತ್ಯೋದಯ, ಸರ್ವೋದಯ ಹಾಗೂ ರಾಮರಾಜ್ಯದ ಬಗ್ಗೆ ತಿಳಿದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರುಗಳಾದ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಭಾನುಪ್ರಕಾಶ್, ಶಿವಯೋಗಿ ಸ್ವಾಮೀಜಿ ಮೊದಲಾವರು ಇದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…