Advertisement
MIRROR FOCUS

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

Share

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.ಈ ಮುನ್ನ, ಗುಜರಾತ್ ನ ಎಟಿಎಸ್ ತಂಡಕ್ಕೆ ಡಿಜಿಟಲ್ ವಿಡಿಯೋ ರೆಕಾರ್ಡರ್ ಪತ್ತೆಯಾಗಿತ್ತು.ಬ್ಲಾಕ್  ಬಾಕ್ಸ್ ನಲ್ಲಿ  ವಿಮಾನದ ವೇಗ,ಎತ್ತರ, ಎಂಜಿನ್ ಪರಿಸ್ಥಿತಿ, ಕಾಕ್ ಪಿಟ್ ನ ಧ್ವನಿ ದಾಖಲೆ, ಪೈಲೆಟ್ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದ ನಡುವಿನ ಸಂವಹನ ಮಾಹಿತಿ ಸೇರಿದಂತೆ ಹಲವು ವಿವರಗಳು ಇರಲಿವೆ. ಅಪಘಾತದ ಕಾರಣ ಪತ್ತೆಯಲ್ಲಿ ಈ ಬ್ಲಾಕ್ ಬಾಕ್ಸ್ ಮುಖ್ಯ ಪಾತ್ರ ವಹಿಸಲಿದೆ.

ಈ ಮಧ್ಯೆ, ಗಾಯಾಳುಗಳ ಚಿಕಿತ್ಸೆಗಾಗಿ ಅಹಮದಾಬಾದ್ ನ ಮಿಲಿಟರಿ ದಂಡು ಪ್ರದೇಶದಲ್ಲಿ ಭಾರತೀಯ ಸೇನೆ ರಕ್ತದಾನ ಶಿಬಿರ ಆಯೋಜಿಸಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.ಗಾಯಾಳುಗಳ ಕುಟುಂಬದವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ವಸತಿ ಇಲಾಖೆಯಿಂದ ಕುಟುಂಬದವರಿಗೆ ವಸತಿ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ -ಎನ್ ಡಿಆರ್ ಎಫ್ ಮಹಾನಿರ್ದೇಶಕ ಹರಿ ಓಂ, ಪರಿಹಾರ ಕಾರ್ಯಾಚರಣೆಯಲ್ಲಿ ಎನ್ ಡಿಆರ್ ಎಫ್ ನ ಆರು ತಂಡಗಳು ನಿರತವಾಗಿವೆ. ಕೇಂದ್ರ ಮತ್ತು ರಾಜ್ಯದ ಇತರ ಸಂಸ್ಥೆಗಳೊಂದಿಗೆ ಸಮನ್ವಯದಿಂದ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

8 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

9 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

19 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

19 hours ago