Advertisement
MIRROR FOCUS

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

Share

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.ಈ ಮುನ್ನ, ಗುಜರಾತ್ ನ ಎಟಿಎಸ್ ತಂಡಕ್ಕೆ ಡಿಜಿಟಲ್ ವಿಡಿಯೋ ರೆಕಾರ್ಡರ್ ಪತ್ತೆಯಾಗಿತ್ತು.ಬ್ಲಾಕ್  ಬಾಕ್ಸ್ ನಲ್ಲಿ  ವಿಮಾನದ ವೇಗ,ಎತ್ತರ, ಎಂಜಿನ್ ಪರಿಸ್ಥಿತಿ, ಕಾಕ್ ಪಿಟ್ ನ ಧ್ವನಿ ದಾಖಲೆ, ಪೈಲೆಟ್ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದ ನಡುವಿನ ಸಂವಹನ ಮಾಹಿತಿ ಸೇರಿದಂತೆ ಹಲವು ವಿವರಗಳು ಇರಲಿವೆ. ಅಪಘಾತದ ಕಾರಣ ಪತ್ತೆಯಲ್ಲಿ ಈ ಬ್ಲಾಕ್ ಬಾಕ್ಸ್ ಮುಖ್ಯ ಪಾತ್ರ ವಹಿಸಲಿದೆ.

ಈ ಮಧ್ಯೆ, ಗಾಯಾಳುಗಳ ಚಿಕಿತ್ಸೆಗಾಗಿ ಅಹಮದಾಬಾದ್ ನ ಮಿಲಿಟರಿ ದಂಡು ಪ್ರದೇಶದಲ್ಲಿ ಭಾರತೀಯ ಸೇನೆ ರಕ್ತದಾನ ಶಿಬಿರ ಆಯೋಜಿಸಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.ಗಾಯಾಳುಗಳ ಕುಟುಂಬದವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ವಸತಿ ಇಲಾಖೆಯಿಂದ ಕುಟುಂಬದವರಿಗೆ ವಸತಿ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ -ಎನ್ ಡಿಆರ್ ಎಫ್ ಮಹಾನಿರ್ದೇಶಕ ಹರಿ ಓಂ, ಪರಿಹಾರ ಕಾರ್ಯಾಚರಣೆಯಲ್ಲಿ ಎನ್ ಡಿಆರ್ ಎಫ್ ನ ಆರು ತಂಡಗಳು ನಿರತವಾಗಿವೆ. ಕೇಂದ್ರ ಮತ್ತು ರಾಜ್ಯದ ಇತರ ಸಂಸ್ಥೆಗಳೊಂದಿಗೆ ಸಮನ್ವಯದಿಂದ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

9 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

11 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

18 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

1 day ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago