Advertisement
MIRROR FOCUS

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

Share

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.ಈ ಮುನ್ನ, ಗುಜರಾತ್ ನ ಎಟಿಎಸ್ ತಂಡಕ್ಕೆ ಡಿಜಿಟಲ್ ವಿಡಿಯೋ ರೆಕಾರ್ಡರ್ ಪತ್ತೆಯಾಗಿತ್ತು.ಬ್ಲಾಕ್  ಬಾಕ್ಸ್ ನಲ್ಲಿ  ವಿಮಾನದ ವೇಗ,ಎತ್ತರ, ಎಂಜಿನ್ ಪರಿಸ್ಥಿತಿ, ಕಾಕ್ ಪಿಟ್ ನ ಧ್ವನಿ ದಾಖಲೆ, ಪೈಲೆಟ್ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದ ನಡುವಿನ ಸಂವಹನ ಮಾಹಿತಿ ಸೇರಿದಂತೆ ಹಲವು ವಿವರಗಳು ಇರಲಿವೆ. ಅಪಘಾತದ ಕಾರಣ ಪತ್ತೆಯಲ್ಲಿ ಈ ಬ್ಲಾಕ್ ಬಾಕ್ಸ್ ಮುಖ್ಯ ಪಾತ್ರ ವಹಿಸಲಿದೆ.

ಈ ಮಧ್ಯೆ, ಗಾಯಾಳುಗಳ ಚಿಕಿತ್ಸೆಗಾಗಿ ಅಹಮದಾಬಾದ್ ನ ಮಿಲಿಟರಿ ದಂಡು ಪ್ರದೇಶದಲ್ಲಿ ಭಾರತೀಯ ಸೇನೆ ರಕ್ತದಾನ ಶಿಬಿರ ಆಯೋಜಿಸಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.ಗಾಯಾಳುಗಳ ಕುಟುಂಬದವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ವಸತಿ ಇಲಾಖೆಯಿಂದ ಕುಟುಂಬದವರಿಗೆ ವಸತಿ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ -ಎನ್ ಡಿಆರ್ ಎಫ್ ಮಹಾನಿರ್ದೇಶಕ ಹರಿ ಓಂ, ಪರಿಹಾರ ಕಾರ್ಯಾಚರಣೆಯಲ್ಲಿ ಎನ್ ಡಿಆರ್ ಎಫ್ ನ ಆರು ತಂಡಗಳು ನಿರತವಾಗಿವೆ. ಕೇಂದ್ರ ಮತ್ತು ರಾಜ್ಯದ ಇತರ ಸಂಸ್ಥೆಗಳೊಂದಿಗೆ ಸಮನ್ವಯದಿಂದ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

14 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

16 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

18 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago