ಮುಂಬೈಯ ಪನ್ವೇಲ್ ಪ್ರದೇಶದಲ್ಲಿನ ಕಸ್ಟಮ್ಸ್ ಗೋದಾಮಿನಿಂದ ಸುಮಾರು 35 ಮಂದಿ ಭದ್ರತಾ ಸಿಬ್ಬಂದಿಯನ್ನು ಬೆದರಿಸಿ 40 ಟನ್ ಕಾಳುಮೆಣಸು ಹಾಗೂ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಾಖಲಾದ ಪ್ರಕರಣದಂತೆ ಸುಮಾರು 35 ಮಂದಿಯ ತಂಡವು ಟ್ರಕ್ ಹಾಗೂ ಇತರ ವಾಹನಗಳಲ್ಲಿ ಆಗಮಿಸಿ ಭದ್ರತಾ ಸಿಬಂದಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಗೋದಾಮಿನ ಬೀಗ ಒಡೆದು ಅಡಿಕೆ ಹಾಗೂ ಕಾಳುಮೆಣಸು ಸಾಗಿಸಲಾಗಿದೆ. 3 ಕಂಪನಿಗಳ ಸುಮಾರು 626 ಟನ್ ಗಳಷ್ಟು ಕಾಳುಮೆಣಸು ಹಾಗೂ ಅಡಿಕೆಯ 2022 ರಿಂದ ಕಸ್ಟಮ್ಸ್ ಕ್ಲಿಯರ್ಗಾಗಿ ಗೋದಾಮಿನಲ್ಲಿ ಸಂಗ್ರಹವಾಗಿತ್ತು.ಈ ಹಿಂದೆ ಕೂಡಾ ಇಂತಹದ್ದೇ ಪ್ರಕರಣವು 2022 ರಲ್ಲಿ ಹಾಗೂ 2023 ರಲ್ಲಿ ನಡೆದಿತ್ತು. ಕಸ್ಟಮ್ಸ್ ಗೋದಾಮಿನಿಂದ ಕಳವು ನಡೆದಿತ್ತು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…