MIRROR FOCUS

ಕೊಕ್ಕೋ ಬಳಿಕ ಈಗ ಕಾಳುಮೆಣಸು ಧಾರಣೆ ಏರಿಕೆ ನಿರೀಕ್ಷೆ | ಅಂತರಾಷ್ಟ್ರೀಯ ಧಾರಣೆಯೂ ಏರಿಕೆಯ ಹಾದಿಯಲ್ಲಿ | 615 ರೂಪಾಯಿ ತಲಪಿದ ಧಾರಣೆ | ಏರಿಕೆಗೆ ಕಾರಣವೇನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಳುಮೆಣಸು ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕಾಳುಮೆಣಸು ಧಾರಣೆ ಏರಿಕೆಯಾಗುತ್ತಿದೆ. ಕೊಕೋ ಬಳಿಕ ಇದೀಗ ಕಾಳುಮೆಣಸು ಕೂಡಾ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಕಾರಣ, ಇಳುವರಿ ಕೊರತೆ, ಹವಾಮಾನ ಪರಿಸ್ಥಿತಿಗಳಿಂದಾಗಿ ಉತ್ಪಾದನೆಯೂ ಕುಸಿತ ಕಂಡಿದೆ. ಹೀಗಾಗಿ ಈಗ ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲದೆ ಧಾರಣೆ ಏರಿಕೆಯಾಗುತ್ತಿದೆ. ಭಾರತದಲ್ಲಿ 590-600 ರೂಪಾಯಿ ಆಸುಪಾಸಿನಲ್ಲಿ ಸದ್ಯದ ಧಾರಣೆ ಇತ್ತು, ಈಗ 615 ರೂಪಾಯಿ ಸದ್ಯದ ಧಾರಣೆಯಾಗಿದೆ.…….ಮುಂದೆ ಓದಿ…..

Advertisement
Advertisement

ಕೊಕ್ಕೋ ಬಳಿಕ ಇದೀಗ ಕಾಳುಮೆಣಸು ಧಾರಣೆ ಏರಿಕೆ ಕಂಡಿದೆ. ಕೊಕ್ಕೋ ಮಾದರಿಯಲ್ಲಿಯೇ ಇಳುವರಿ ಕೊರತೆಯ ಕಾರಣದಿಂದ ಧಾರಣೆ ಏರಿಕೆ ಕಾಣುತ್ತಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ, ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಧಾರಣೆ ಏರಿಕೆಯಾಗುತ್ತಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ನಡೆಯುತ್ತಿದೆ.

ವಿಯೆಟ್ನಾಂನಲ್ಲಿ ಸಾರ್ವಕಾಲಿಕ ದಾಖಲೆಯ ಧಾರಣೆ ತಲಪಿದೆ.ಕಳೆದ ವಾರಕ್ಕಿಂತ ಈ ವಾರದ ಧಾರಣೆ ಶೇ.40 ರಷ್ಟು ಏರಿಕೆಯಾಗಿದೆ. ಯೂರೋಪ್, ಯುಎಸ್ ಮತ್ತು ಚೀನಾದಂತಹ ಪ್ರಮುಖ ಮಾರುಕಟ್ಟೆಗಳಲ್ಲಿ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯ ಕಾರಣದಿಂದ ಕಾಳುಮೆಣಸು ಬೆಲೆ  ಏರಿಕೆಗೆ ತಜ್ಞರು ಕಾರಣವೆಂದು ಹೇಳುತ್ತಾರೆ.

ಈಗ ಭಾರತದಲ್ಲೂ ಕಾಳುಮೆಣಸು ಬೇಡಿಕೆ ಕಂಡುಬಂದಿದ್ದು, ಧಾರಣೆ ಹೆಚ್ಚಾಗುತ್ತಿದೆ. ವಿಯೆಟ್ನಾಂನಲ್ಲಿ ಕಾಳುಮೆಣಸು ಕೊರತೆಯ ಕಾರಣದಿಂದ ಈಗಾಗಲೇ ಬ್ರೆಜಿಲ್‌, ಇಂಡೋನೇಷ್ಯಾ ಮತ್ತು ಕಾಂಬೋಡಿಯಾದಿಂದ ಕಾಳುಮೆಣಸು ಆಮದು ಮಾಡಿಕೊಳ್ಳಲು ಪ್ರಾರಂಭಿಸಲಾಗಿದೆ.

ಪ್ರಮುಖವಾಗಿ ಕಾಳುಮೆಣಸು ಉತ್ಪಾದಕ ದೇಶಗಳಲ್ಲಿ ಹವಾಮಾನ ಪರಿಸ್ಥಿತಿಗಳಿಂದಾಗಿ ಕಾಳುಮೆಣಸು ಬೆಳೆ ಕೈಕೊಟ್ಟಿದೆ. ಅದರ ಜೊತೆಗೆ ಈ ಹಿಂದೆ ಕಾಳುಮೆಣಸು ಧಾರಣೆ ಕಡಿಮೆ ಇದ್ದ ಕಾರಣದಿಂದ ರೈತರು ಇತರ ಬೆಳೆಗಳಿಗೆ ಅದರಲ್ಲೂಹಣ್ಣಿನ ಬೆಳೆಗಳತ್ತ ತಮ್ಮ ಕೃಷಿಯನ್ನು ಬದಲಾಯಿಸಿದ್ದಾರೆ.ಈಗಿನ ಪರಿಸ್ಥಿತಿಯಲ್ಲಿ ವಿಯೆಟ್ನಾಂಗೆ ಮುಂದಿನ 2-3 ವರ್ಷಗಳ ಕಾಲ ಕಾಳುಮೆಣಸು ಕೊರತೆ ಕಾಡಬಹುದು, ಅದರ ಜೊತೆಗೆ ಇತರ ಕಾಳುಮೆಣಸು ಬೆಳೆಯುವ ದೇಶದಲ್ಲೂ ಹವಾಮಾನ ಪರಿಸ್ಥಿತಿ ಕೈಕೊಟ್ಟಿದೆ.

Advertisement

ವಿಯೆಟ್ನಾಂನ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಕರಿಮೆಣಸು ರಫ್ತು 84,000 ಟನ್‌ಗಳಷ್ಟಿತ್ತು, ಇದು ಕಳೆದ ವರ್ಷದಿಂದ ವರ್ಷಕ್ಕೆ 18.3 ಶೇಕಡಾ ರಷ್ಟು ಕಡಿಮೆಯಾಗಿದೆ, ಆದರೆ 11.5 ರಷ್ಟು ಧಾರಣೆಯಲ್ಲಿ ಏರಿಕೆಯಾಗಿದೆ. ನಿಧಾನವಾಗಿ ಬೇಡಿಕೆ ಹೆಚ್ಚಾಗುತ್ತಿದ್ದು, ಧಾರಣೆ ಇನ್ನಷ್ಟು ಏರಿಕೆ ನಿಶ್ಚಿತವಾಗಿದೆ. ಭಾರತದಲ್ಲೂ ಈಗ ಧಾರಣೆ ಏರಿಕೆಯ ಸರದಿ ಶುರುವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |

ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…

4 hours ago

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

10 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

11 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

11 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

12 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

13 hours ago