Advertisement
MIRROR FOCUS

ಕೊಕ್ಕೋ ಬಳಿಕ ಈಗ ಕಾಳುಮೆಣಸು ಧಾರಣೆ ಏರಿಕೆ ನಿರೀಕ್ಷೆ | ಅಂತರಾಷ್ಟ್ರೀಯ ಧಾರಣೆಯೂ ಏರಿಕೆಯ ಹಾದಿಯಲ್ಲಿ | 615 ರೂಪಾಯಿ ತಲಪಿದ ಧಾರಣೆ | ಏರಿಕೆಗೆ ಕಾರಣವೇನು..?

Share

ಕಾಳುಮೆಣಸು ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕಾಳುಮೆಣಸು ಧಾರಣೆ ಏರಿಕೆಯಾಗುತ್ತಿದೆ. ಕೊಕೋ ಬಳಿಕ ಇದೀಗ ಕಾಳುಮೆಣಸು ಕೂಡಾ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಕಾರಣ, ಇಳುವರಿ ಕೊರತೆ, ಹವಾಮಾನ ಪರಿಸ್ಥಿತಿಗಳಿಂದಾಗಿ ಉತ್ಪಾದನೆಯೂ ಕುಸಿತ ಕಂಡಿದೆ. ಹೀಗಾಗಿ ಈಗ ಬೇಡಿಕೆಗೆ ತಕ್ಕಂತೆ ಪೂರೈಕೆ ಇಲ್ಲದೆ ಧಾರಣೆ ಏರಿಕೆಯಾಗುತ್ತಿದೆ. ಭಾರತದಲ್ಲಿ 590-600 ರೂಪಾಯಿ ಆಸುಪಾಸಿನಲ್ಲಿ ಸದ್ಯದ ಧಾರಣೆ ಇತ್ತು, ಈಗ 615 ರೂಪಾಯಿ ಸದ್ಯದ ಧಾರಣೆಯಾಗಿದೆ.…….ಮುಂದೆ ಓದಿ…..

ಕೊಕ್ಕೋ ಬಳಿಕ ಇದೀಗ ಕಾಳುಮೆಣಸು ಧಾರಣೆ ಏರಿಕೆ ಕಂಡಿದೆ. ಕೊಕ್ಕೋ ಮಾದರಿಯಲ್ಲಿಯೇ ಇಳುವರಿ ಕೊರತೆಯ ಕಾರಣದಿಂದ ಧಾರಣೆ ಏರಿಕೆ ಕಾಣುತ್ತಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ, ಹೀಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಧಾರಣೆ ಏರಿಕೆಯಾಗುತ್ತಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ನಡೆಯುತ್ತಿದೆ.

Advertisement

ವಿಯೆಟ್ನಾಂನಲ್ಲಿ ಸಾರ್ವಕಾಲಿಕ ದಾಖಲೆಯ ಧಾರಣೆ ತಲಪಿದೆ.ಕಳೆದ ವಾರಕ್ಕಿಂತ ಈ ವಾರದ ಧಾರಣೆ ಶೇ.40 ರಷ್ಟು ಏರಿಕೆಯಾಗಿದೆ. ಯೂರೋಪ್, ಯುಎಸ್ ಮತ್ತು ಚೀನಾದಂತಹ ಪ್ರಮುಖ ಮಾರುಕಟ್ಟೆಗಳಲ್ಲಿ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯ ಕಾರಣದಿಂದ ಕಾಳುಮೆಣಸು ಬೆಲೆ  ಏರಿಕೆಗೆ ತಜ್ಞರು ಕಾರಣವೆಂದು ಹೇಳುತ್ತಾರೆ.

ಈಗ ಭಾರತದಲ್ಲೂ ಕಾಳುಮೆಣಸು ಬೇಡಿಕೆ ಕಂಡುಬಂದಿದ್ದು, ಧಾರಣೆ ಹೆಚ್ಚಾಗುತ್ತಿದೆ. ವಿಯೆಟ್ನಾಂನಲ್ಲಿ ಕಾಳುಮೆಣಸು ಕೊರತೆಯ ಕಾರಣದಿಂದ ಈಗಾಗಲೇ ಬ್ರೆಜಿಲ್‌, ಇಂಡೋನೇಷ್ಯಾ ಮತ್ತು ಕಾಂಬೋಡಿಯಾದಿಂದ ಕಾಳುಮೆಣಸು ಆಮದು ಮಾಡಿಕೊಳ್ಳಲು ಪ್ರಾರಂಭಿಸಲಾಗಿದೆ.

Advertisement

ಪ್ರಮುಖವಾಗಿ ಕಾಳುಮೆಣಸು ಉತ್ಪಾದಕ ದೇಶಗಳಲ್ಲಿ ಹವಾಮಾನ ಪರಿಸ್ಥಿತಿಗಳಿಂದಾಗಿ ಕಾಳುಮೆಣಸು ಬೆಳೆ ಕೈಕೊಟ್ಟಿದೆ. ಅದರ ಜೊತೆಗೆ ಈ ಹಿಂದೆ ಕಾಳುಮೆಣಸು ಧಾರಣೆ ಕಡಿಮೆ ಇದ್ದ ಕಾರಣದಿಂದ ರೈತರು ಇತರ ಬೆಳೆಗಳಿಗೆ ಅದರಲ್ಲೂಹಣ್ಣಿನ ಬೆಳೆಗಳತ್ತ ತಮ್ಮ ಕೃಷಿಯನ್ನು ಬದಲಾಯಿಸಿದ್ದಾರೆ.ಈಗಿನ ಪರಿಸ್ಥಿತಿಯಲ್ಲಿ ವಿಯೆಟ್ನಾಂಗೆ ಮುಂದಿನ 2-3 ವರ್ಷಗಳ ಕಾಲ ಕಾಳುಮೆಣಸು ಕೊರತೆ ಕಾಡಬಹುದು, ಅದರ ಜೊತೆಗೆ ಇತರ ಕಾಳುಮೆಣಸು ಬೆಳೆಯುವ ದೇಶದಲ್ಲೂ ಹವಾಮಾನ ಪರಿಸ್ಥಿತಿ ಕೈಕೊಟ್ಟಿದೆ.

ವಿಯೆಟ್ನಾಂನ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಕರಿಮೆಣಸು ರಫ್ತು 84,000 ಟನ್‌ಗಳಷ್ಟಿತ್ತು, ಇದು ಕಳೆದ ವರ್ಷದಿಂದ ವರ್ಷಕ್ಕೆ 18.3 ಶೇಕಡಾ ರಷ್ಟು ಕಡಿಮೆಯಾಗಿದೆ, ಆದರೆ 11.5 ರಷ್ಟು ಧಾರಣೆಯಲ್ಲಿ ಏರಿಕೆಯಾಗಿದೆ. ನಿಧಾನವಾಗಿ ಬೇಡಿಕೆ ಹೆಚ್ಚಾಗುತ್ತಿದ್ದು, ಧಾರಣೆ ಇನ್ನಷ್ಟು ಏರಿಕೆ ನಿಶ್ಚಿತವಾಗಿದೆ. ಭಾರತದಲ್ಲೂ ಈಗ ಧಾರಣೆ ಏರಿಕೆಯ ಸರದಿ ಶುರುವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

3 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

11 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

12 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

13 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

13 hours ago