ಅರಂತೋಡು: ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ

September 26, 2020
10:57 PM

 ಸಾರ್ವಜನಿಕ ರಕ್ತದಾನ ಶಿಬಿರ ,ರಕ್ತ ವರ್ಗೀಕರಣ ಶಿಬಿರ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಕಾರ್ಯಕ್ರಮ  ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು .

ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ,  ಎಸ್ ಕೆ ಎಸ್ ಎಸ್ ಎಫ್ ಸುಳ್ಯ  ಕ್ಲಸ್ಟರ್, ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, (ರಿ) ಪಠೇಲ್ ಚಾರಿಟೇಬಲ್ ಟ್ರಸ್ಟ್  (ರಿ), ಪಠೇಲ್ ಮೆಡಿಕಲ್ &ಲ್ಯಾಬೋರೇಟರಿ ಸುಳ್ಯ ಮತ್ತು  ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು , ಕೆ.ಎಸ್ ಹೆಗ್ಡೆ  ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ   ಅಲ್ಹಾಜ್ ಇಸ್ಹಾಕ್ ಬಾಖವಿ ದುವಾ ನೆರವೇರಿಸಿದ್ದರು.

 

 

ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್ ಅಧ್ಯಕ್ಷ  ಅಬ್ದುಲ್ ರಝಾಕ್  ವಹಿಸಿದ್ದರು. ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಬಹು  ಇಸ್ಮಾಯಿಲ್ ತಂಙಳ್ ಉದ್ಘಾಟಿಸಿದರು.   ಸಮಾರಂಭದಲ್ಲಿ  ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ , ಎಸ್‌ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷ ಜಮಾಲ್ ಬೆಳ್ಳಾರೆ,ಕೆ.ವಿ.ಜಿ.ಆರ್ಯುವೇದ  ಕಾಲೇಜ್ ವೈದ್ಯರಾದ ಡಾ।ಹರ್ಷವರ್ಧನ್ ,ಅರಂತೋಡು ಜಮಾಅತ್ ಅಧ್ಯಕ್ಷರಾದ ಅಶ್ರಫ್ ಗುಂಡಿ,ಪಠೇಲ್ ಮೆಡಿಕಲ್ ಮಾಲಕರಾದ ಬದ್ರುದ್ದೀನ್ ಪಠೇಲ್,ಸುನ್ನಿ ಮಹಲ್ ಫೆಡರೇಶನ್ ಅಧ್ಯಕ್ಷ ಇಬ್ರಾಹಿಂ ಹಾಜಿ ಕತ್ತಾರ್,  ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಾದ ಉನೈಸ್ ಪೆರಾಜೆ,ದ.ಕ.ವಿಖಾಯ ರಕ್ತದಾನಿ ಉಸ್ತುವಾರಿ ತಾಜುದ್ದೀನ್ ಟರ್ಲಿ,ಸುಳ್ಯ ಎಸ್  ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಶರೀಫ್ ಅಜ್ವಾವರ,ಎಲಿಮಲೆ ಶಾಖಾ ಅಧ್ಯಕ್ಷ  ಸಿದ್ದೀಕ್ ತಟ್ಟುಕಡ ,ಸುಳ್ಯ ವಲಯ ವಿಖಾಯ ಕನ್ವೀನರ್ ಕಲಂದರ್ ಎಲಿಮಲೆ,  ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್   ಸೇರಿದಂತೆ ಮುಂತಾದವರು  ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ಕೊಡಗು ಜಿಲ್ಲೆಯ ಪ್ರಮುಖ ನೇತಾರರು ಭಾಗವಹಿಸಿ ರಕ್ತದಾನ ಮಾಡಿದರು.  ಸುಳ್ಯ ಕ್ಲಸ್ಟರ್ ಕಾರ್ಯದರ್ಶಿ ಅಬ್ದುಲ್ ಖಾದರ್ ಸ್ವಾಗತಿಸಿ  ಸುಳ್ಯ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಅರಂತೋಡು  ವಂದಿಸಿದರು.ಜುಬೈರ್ ,ಆಶೀಕ್ ಸುಳ್ಯ ,ಮುಝಮ್ಮಿಲ್,ಆಶೀಕ್ ,ಹನೀಫ್ ಗೂನಡ್ಕ ಸಹಕರಿಸಿದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ
June 10, 2026
2:46 PM
by: ಸಾಯಿಶೇಖರ್ ಕರಿಕಳ
ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!
June 10, 2026
11:43 AM
by: ಮಿರರ್‌ ಡೆಸ್ಕ್
ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror